ವಿಚಾರಣೆ ವೇಳೆ ಪ್ರಜ್ವಲ್ ಪರ ವಕೀಲ ಕೇಶವ ರೆಡ್ಡಿ, ‘ಅರ್ಜಿದಾರರು ಸಲ್ಲಿಸಿರುವ ಅರ್ಜಿ ಪೂರ್ಣ ರೂಪದಲ್ಲಿ ಇಲ್ಲ. ಹೈಕೋರ್ಟ್ ಕಚೇರಿ ನೀಡಿದ್ದ ಕಾಲಮಿತಿಯಲ್ಲಿ ಅರ್ಜಿಯಲ್ಲಿನ ಲೋಪದೋಷ ಸರಿಪಡಿಸಿಲ್ಲ. ಆದ್ದರಿಂದ ಕ್ರಮಬದ್ಧವಲ್ಲದ ಈ ಅರ್ಜಿ ವಜಾಗೊಳಿಸಬೇಕು’ ಎಂದು ಕೋರಿದರು. ಇದನ್ನು ಪುರಸ್ಕರಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.