ಪ್ರಜಾ ಪ್ರತಿನಿಧಿ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗ ಬರೆದಿದ್ದ ಪತ್ರಕ್ಕೆ ಉತ್ತರಿಸಿರುವ ಜಿಲ್ಲಾಧಿಕಾರಿ, ‘ಅಭ್ಯರ್ಥಿ ಸಲ್ಲಿಸುವ ಅಫಿಡವಿಟ್ನ ಮಾಹಿತಿಯ ಸತ್ಯಾಸತ್ಯತೆ ಪರಿಶೀಲಿಸುವ ಪ್ರಾಧಿಕಾರ ಇದಾಗಿರುವುದಿಲ್ಲ. ಈ ಬಗ್ಗೆ ದೂರುದಾರರೇ ನ್ಯಾಯಾಲಯದಲ್ಲಿ ಪ್ರಶ್ನಿಸಿ, ಸಂಬಂಧಿಸಿದ ಇಲಾಖೆಗಳಿಂದ ತನಿಖೆ ಮೂಲಕ ಮಾಹಿತಿ ಪಡೆಯಬಹುದು’ ಎಂದು ಹೇಳಿದ್ದಾರೆ.