<p><strong>ಹುಬ್ಬಳ್ಳಿ: </strong>‘ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿರುವ ಪತ್ರದಲ್ಲಿ ಯಾವುದೇ ಹುರುಳಿಲ್ಲ. ಪತ್ರದ ಮೂಲಕ ಮತ್ತಷ್ಟು ಗೊಂದಲ ಸೃಷ್ಟಿಸಿದ್ದಾರೆ’ ಎಂದು ಶಾಸಕ ಎಚ್.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.</p>.<p>ಜಾವಡೇಕರ್ ಪತ್ರದಲ್ಲಿ ಏನಿದೆ ಎಂದು ಬಿಜೆಪಿಯವರು ಸಂಭ್ರಮಿಸುತ್ತಿದ್ದಾರೊ ಗೊತ್ತಿಲ್ಲ. ಯೋಜನೆಗೆ ತಡೆ ನೀಡಿದ್ದ ಕೇಂದ್ರದ ವಿರುದ್ದ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕಣ್ಣೊರೆಸಲು ತಡೆ ನೀಡಿಲ್ಲ ಎಂದು ಪತ್ರ ಬರೆದಿದ್ದಾರೆ. ಆ ಮೂಲಕ ರಾಜ್ಯದ ಜನರನ್ನು ಮೂರ್ಖರನ್ನಾಗಿ ಮಾಡಲು ಹೊರಟಿದ್ದಾರೆಎಂದು ಹುಬ್ಬಳ್ಳಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಅರಣ್ಯ ಮತ್ತು ಪರಿಸರ ಇಲಾಖೆ ಒಪ್ಪಿಗೆ ನೀಡಿದ ತಕ್ಷಣ ಯೋಜನೆ ಕೈಗೆತ್ತಿಕೊಳ್ಳಬಹುದು ಎಂದು ಜಾವಡೇಕರ್ ಹೇಳಿದ್ದಾರೆ. ಆದರೆ, ತೀರ್ಪಿನ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂಬ ಬೇಡಿಕೆಗೆ ಬಗ್ಗೆ ಎಲ್ಲೂ ಪ್ರಸ್ತಾಪಿಸದೆ, ರಾಜ್ಯದವರಿಗೆ ಮತ್ತೊಮ್ಮೆ ಮೋಸ ಮಾಡಿದ್ದಾರೆಎಂದು ಟೀಕಿಸಿದರು.</p>.<p>ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲೂ ಬಿ.ಎಸ್. ಯಡಿಯೂರಪ್ಪ ಅವರು, ಗೋವಾ ಮುಖ್ಯಮಂತ್ರಿ ಬರೆದ ಪತ್ರವನ್ನು ಓದಿ ಜನರಿಗೆ ವಂಚಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ಇಲ್ಲಿಗೆ ಬಂದು ಹುಸಿ ಭರವಸೆ ನೀಡಿ ಹೋದರು. ಈ ಕುರಿತು ವಿರೋಧ ಪಕ್ಷಗಳ ಒತ್ತಡ, ಆಗ್ರಹ ಹಾಗೂ ಬರೆದ ಪತ್ರಕ್ಕೂ ರಾಜ್ಯ ಸರ್ಕಾರ ಬೆಲೆ ಕೊಡುತ್ತಿಲ್ಲಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಗಡಿ ಮತ್ತು ನದಿ ವಿವಾದಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಇನ್ನಾದರೂ ಕುಂಭಕರ್ಣ ನಿದ್ದೆಯಿಂದ ಎಚ್ಚೆತ್ತುಕೊಳ್ಳಬೇಕು. ಈ ಬಗ್ಗೆ ವಿನಾ ಕಾರಣ ಚಕಾರ ಎತ್ತುವವರಿಗೆ ರಾಜ್ಯದ ನಿಲುವನ್ನು ಸ್ಪಷ್ಟವಾಗಿ ತಿಳಿಸಬೇಕು’ ಎಂದು ಹೇಳಿದರು.</p>.<p><strong>ಇದನ್ನೂ ಓದಿ...</strong><a href="https://www.prajavani.net/stories/national/green-signal-for-mahadayi-javadekar-letter-to-basavaraj-bommayi-693148.html" target="_blank">ಮಹದಾಯಿಗೆ ಹಸಿರು ನಿಶಾನೆ: ಸಚಿವ ಬಸವರಾಜ ಬೊಮ್ಮಾಯಿಗೆ ಜಾವಡೇಕರ್ ಪತ್ರ</a></p>.<p class="Subhead"><strong>ಒಗ್ಗಟ್ಟಿನ ಹೋರಾಟ ಅಗತ್ಯ:</strong>‘ಮಹದಾಯಿ ವಿಚಾರಕ್ಕೆ ಸಂಬಂಧಿಸಿದ ಹೋರಾಟ ವೈಯಕ್ತಿಕ ಉದ್ದೇಶದಿಂದ ಕೂಡಿರಬಾರದು. ಪಕ್ಷಾತೀತ ಹಾಗೂ ರಾಜ್ಯದ ಹಿತಾಸಕ್ತಿಯಿಂದ ಎಲ್ಲರೂ ಒಗ್ಗಟ್ಟಾಗಿ ಸಂಘಟಿತ ಹೋರಾಟ ನಡೆಸಬೇಕು. ಆ ಹಿನ್ನೆಲೆಯಲ್ಲಿ ಎಲ್ಲರೂ ಒಂದಾದರೆ, ನಮ್ಮ ಬೆಂಬಲ ಯಾವಾಗಲೂ ಇದ್ದೇ ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p class="Subhead"><strong>ಇದನ್ನೂ ಓದಿ...<a href="https://www.prajavani.net/stories/national/good-news-for-state-on-kalasa-banduri-says-union-environment-minister-prakash-javadekar-692102.html" target="_blank"></a></strong><a href="https://www.prajavani.net/stories/national/good-news-for-state-on-kalasa-banduri-says-union-environment-minister-prakash-javadekar-692102.html" target="_blank">ಕಳಸಾ–ಬಂಡೂರಿ ಯೋಜನೆ ಬಗ್ಗೆ ಶೀಘ್ರವೇ ರಾಜ್ಯಕ್ಕೆ ಸಿಹಿ ಸುದ್ದಿ: ಜಾವಡೇಕರ್ ಹೇಳಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದಿರುವ ಪತ್ರದಲ್ಲಿ ಯಾವುದೇ ಹುರುಳಿಲ್ಲ. ಪತ್ರದ ಮೂಲಕ ಮತ್ತಷ್ಟು ಗೊಂದಲ ಸೃಷ್ಟಿಸಿದ್ದಾರೆ’ ಎಂದು ಶಾಸಕ ಎಚ್.ಕೆ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.</p>.<p>ಜಾವಡೇಕರ್ ಪತ್ರದಲ್ಲಿ ಏನಿದೆ ಎಂದು ಬಿಜೆಪಿಯವರು ಸಂಭ್ರಮಿಸುತ್ತಿದ್ದಾರೊ ಗೊತ್ತಿಲ್ಲ. ಯೋಜನೆಗೆ ತಡೆ ನೀಡಿದ್ದ ಕೇಂದ್ರದ ವಿರುದ್ದ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಕಣ್ಣೊರೆಸಲು ತಡೆ ನೀಡಿಲ್ಲ ಎಂದು ಪತ್ರ ಬರೆದಿದ್ದಾರೆ. ಆ ಮೂಲಕ ರಾಜ್ಯದ ಜನರನ್ನು ಮೂರ್ಖರನ್ನಾಗಿ ಮಾಡಲು ಹೊರಟಿದ್ದಾರೆಎಂದು ಹುಬ್ಬಳ್ಳಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಅರಣ್ಯ ಮತ್ತು ಪರಿಸರ ಇಲಾಖೆ ಒಪ್ಪಿಗೆ ನೀಡಿದ ತಕ್ಷಣ ಯೋಜನೆ ಕೈಗೆತ್ತಿಕೊಳ್ಳಬಹುದು ಎಂದು ಜಾವಡೇಕರ್ ಹೇಳಿದ್ದಾರೆ. ಆದರೆ, ತೀರ್ಪಿನ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕೆಂಬ ಬೇಡಿಕೆಗೆ ಬಗ್ಗೆ ಎಲ್ಲೂ ಪ್ರಸ್ತಾಪಿಸದೆ, ರಾಜ್ಯದವರಿಗೆ ಮತ್ತೊಮ್ಮೆ ಮೋಸ ಮಾಡಿದ್ದಾರೆಎಂದು ಟೀಕಿಸಿದರು.</p>.<p>ಹಿಂದೆ ಹುಬ್ಬಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲೂ ಬಿ.ಎಸ್. ಯಡಿಯೂರಪ್ಪ ಅವರು, ಗೋವಾ ಮುಖ್ಯಮಂತ್ರಿ ಬರೆದ ಪತ್ರವನ್ನು ಓದಿ ಜನರಿಗೆ ವಂಚಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಕೂಡ ಇಲ್ಲಿಗೆ ಬಂದು ಹುಸಿ ಭರವಸೆ ನೀಡಿ ಹೋದರು. ಈ ಕುರಿತು ವಿರೋಧ ಪಕ್ಷಗಳ ಒತ್ತಡ, ಆಗ್ರಹ ಹಾಗೂ ಬರೆದ ಪತ್ರಕ್ಕೂ ರಾಜ್ಯ ಸರ್ಕಾರ ಬೆಲೆ ಕೊಡುತ್ತಿಲ್ಲಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಗಡಿ ಮತ್ತು ನದಿ ವಿವಾದಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಇನ್ನಾದರೂ ಕುಂಭಕರ್ಣ ನಿದ್ದೆಯಿಂದ ಎಚ್ಚೆತ್ತುಕೊಳ್ಳಬೇಕು. ಈ ಬಗ್ಗೆ ವಿನಾ ಕಾರಣ ಚಕಾರ ಎತ್ತುವವರಿಗೆ ರಾಜ್ಯದ ನಿಲುವನ್ನು ಸ್ಪಷ್ಟವಾಗಿ ತಿಳಿಸಬೇಕು’ ಎಂದು ಹೇಳಿದರು.</p>.<p><strong>ಇದನ್ನೂ ಓದಿ...</strong><a href="https://www.prajavani.net/stories/national/green-signal-for-mahadayi-javadekar-letter-to-basavaraj-bommayi-693148.html" target="_blank">ಮಹದಾಯಿಗೆ ಹಸಿರು ನಿಶಾನೆ: ಸಚಿವ ಬಸವರಾಜ ಬೊಮ್ಮಾಯಿಗೆ ಜಾವಡೇಕರ್ ಪತ್ರ</a></p>.<p class="Subhead"><strong>ಒಗ್ಗಟ್ಟಿನ ಹೋರಾಟ ಅಗತ್ಯ:</strong>‘ಮಹದಾಯಿ ವಿಚಾರಕ್ಕೆ ಸಂಬಂಧಿಸಿದ ಹೋರಾಟ ವೈಯಕ್ತಿಕ ಉದ್ದೇಶದಿಂದ ಕೂಡಿರಬಾರದು. ಪಕ್ಷಾತೀತ ಹಾಗೂ ರಾಜ್ಯದ ಹಿತಾಸಕ್ತಿಯಿಂದ ಎಲ್ಲರೂ ಒಗ್ಗಟ್ಟಾಗಿ ಸಂಘಟಿತ ಹೋರಾಟ ನಡೆಸಬೇಕು. ಆ ಹಿನ್ನೆಲೆಯಲ್ಲಿ ಎಲ್ಲರೂ ಒಂದಾದರೆ, ನಮ್ಮ ಬೆಂಬಲ ಯಾವಾಗಲೂ ಇದ್ದೇ ಇದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.</p>.<p class="Subhead"><strong>ಇದನ್ನೂ ಓದಿ...<a href="https://www.prajavani.net/stories/national/good-news-for-state-on-kalasa-banduri-says-union-environment-minister-prakash-javadekar-692102.html" target="_blank"></a></strong><a href="https://www.prajavani.net/stories/national/good-news-for-state-on-kalasa-banduri-says-union-environment-minister-prakash-javadekar-692102.html" target="_blank">ಕಳಸಾ–ಬಂಡೂರಿ ಯೋಜನೆ ಬಗ್ಗೆ ಶೀಘ್ರವೇ ರಾಜ್ಯಕ್ಕೆ ಸಿಹಿ ಸುದ್ದಿ: ಜಾವಡೇಕರ್ ಹೇಳಿಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>