ಸುಪ್ರೀಂ ಕೋರ್ಟ್ ತೀರ್ಪಿನ ಅನುಷ್ಠಾನಕ್ಕಾಗಿ ತಾತ್ಕಾಲಿಕ, ಅಂತಿಮ ಜ್ಯೇಷ್ಠತಾ ಪಟ್ಟಿಗಳನ್ನು ತಯಾರಿಸಿ, ಪ್ರಕಟಿಸುವ ಅರ್ಹತಾ ದಿನಾಂಕವನ್ನು ನಿಗದಿಪಡಿಸಬೇಕು, ಮುಂಬಡ್ತಿಗಳನ್ನು ಪುನರಾವಲೋಕನ ಮಾಡುವ, ವೇತನ ಮತ್ತು ಪಿಂಚಣಿಗಳನ್ನು ನಿಗದಿಪಡಿಸುವುದು ಸೇರಿದಂತೆ ಎಲ್ಲ ಪ್ರಕ್ರಿಯೆಯನ್ನು ಪೂರ್ಣಗೊಳಿಸ ಬೇಕು ಎಂದೂ ಆದೇಶದಲ್ಲಿ ಸೂಚನೆ ನೀಡಲಾಗಿದೆ.