ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ‘ನೇಕಾರಿಕೆ; ವೃತ್ತಿ ಮತ್ತು ಸಂಸ್ಕೃತಿ’ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ನೇಕಾರಿಕೆ ವೃತ್ತಿಯಲ್ಲಿರುವವರು ಸಣ್ಣ ಸಣ್ಣ ಜಾತಿಗಳಲ್ಲಿ ಹರಿದು ಹಂಚಿ ಹೋಗಿದ್ದಾರೆ. ಅವರನ್ನು ಜಾತಿ ಸಂಘಟನೆಗಳ ಹೆಸರಿನಲ್ಲಿ ಒಗ್ಗೂಡಿಸುವ ಯತ್ನ ನಡೆಸಲಾಗುತ್ತಿದೆ. ಆದರೆ, ಅದರಿಂದ ದೇಶಕ್ಕೆ ಒಳ್ಳೆಯದಾಗುವುದಿಲ್ಲ’ ಎಂದರು.