ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕ್ಷೇತ್ರದಾದ್ಯಂತ ಬೆಂಬಲಿಗರೊಂದಿಗೆ ಅವಲೋಕನ ಸಭೆಗಳನ್ನು ನಡೆಸಿದ್ದರು. ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲಿಗೆ ಏನು ಕಾರಣ ಎಂಬುದನ್ನು ಚರ್ಚಿಸಿದ್ದಾರೆ. ಇದೇ ವೇಳೆ, ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದು ಉತ್ತಮ ಎನ್ನುವ ಸಲಹೆಗಳನ್ನು ಬೆಂಬಲಿಗರು ಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.