ಪ್ರತಾಪ ಸಿಂಹ ವಿರುದ್ಧ ಪ್ರಕಾಶ್ ರಾಜ್ ದಾಖಲಿಸಿರುವ ಪ್ರಕರಣವನ್ನು ನ್ಯಾಯಾಧೀಶ ಬಿ.ವಿ.ಪಾಟೀಲ ಅವರು ಶನಿವಾರ ವಿಚಾರಣೆ ನಡೆಸಿದರು. ಈ ವೇಳೆ ಪ್ರತಾಪ ಸಿಂಹ ವಿಚಾರಣೆಗೆ ಗೈರು ಹಾಜರಾಗಿದ್ದರು. ಅಷ್ಟೇ ಅಲ್ಲ ಅವರನ್ನು ಪ್ರತಿನಿಧಿಸುವ ವಕೀಲರೂ ಕೋರ್ಟ್ನಲ್ಲಿ ಹಾಜರಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿದ ಕೋರ್ಟ್, ಆರೋಪಿಯನ್ನು ಜಾಮೀನುರಹಿತ ವಾರಂಟ್ ಅಡಿಯಲ್ಲಿ ಕೋರ್ಟ್ಗೆ ಹಾಜರುಪಡಿಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಆದೇಶಿಸಿತು.