ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಜಾಲತಾಣದಲ್ಲಿ ಒಂದು ಪತ್ರ ಪ್ರಕಟಿಸಿದರು ಎಂಬ ಕಾರಣಕ್ಕೆ ನಮ್ಮ ಪಕ್ಷದ ಹಲವರ ಮೇಲೆ ಎಫ್ಐಆರ್ ಹಾಕಿದ್ದರು. ಅದು ಗೃಹ ಸಚಿವರ ಹೆಸರಿನ ನಕಲಿ ಪತ್ರ ಎಂದಾದರೆ ಸೃಷ್ಟಿಕರ್ತರು ಯಾರು ಎಂಬುದನ್ನು ಮೊದಲು ಪತ್ತೆ ಹಚ್ಚಲಿ. ಅದನ್ನು ಬಿಟ್ಟು ಅದನ್ನು ಫಾರ್ವರ್ಡ್ ಮಾಡಿದವರನ್ನೆಲ್ಲಾ ಬಂಧಿಸಿ ಕಿರುಕುಳ ಕೊಡುವುದು ಸರಿಯಲ್ಲ’ ಎಂದರು.