‘ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ಏಕೆ ಪ್ರಕಟಿಸಿಲ್ಲ ಎಂಬುದರ ಬಗ್ಗೆ ನನಗೂ ಗೊಂದಲವಿದೆ. ಕಾರಣ ಸ್ಪಷ್ಟವಾಗಿಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಆಕ್ಷೇಪಣಾ ಅರ್ಜಿಯೊಂದು ಹೈಕೋರ್ಟ್ಗೆ ಸಲ್ಲಿಸಿರುವುದು ಗೊತ್ತು. ಆದರೆ, ನಿಖರವಾದ ಕಾರಣ ತಿಳಿದುಕೊಳ್ಳಲು ಹೊರಟಿದ್ದೇನೆ’ ಎಂದು ಪ್ರತಾಪಗೌಡ ಪಾಟೀಲ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದರು.