ತಾಲ್ಲೂಕಿನ ಮಳೂರುಪಟ್ಟಣ ಗ್ರಾಮದವರಾದ ದೀಕ್ಷಿತಾ ಹೆರಿಗೆ ಸಲುವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆರಿಗೆ ಸಂದರ್ಭ ಶಸ್ತ್ರಚಿಕಿತ್ಸೆ ಕೊಠಡಿಯಲ್ಲಿಯೇ ಸಾವನ್ನಪ್ಪಿದರು. ಇದರಿಂದ ಆತಂಕಗೊಂಡ ವೈದ್ಯೆ ಶೈಲಜಾ ಹಾಗೂ ಸಿಬ್ಬಂದಿ ಶವವನ್ನು ಅಲ್ಲಿಯೇ ಬಿಟ್ಟು ಆಸ್ಪತ್ರೆಯಿಂದ ಕಾಲ್ಕಿತ್ತರು. ಇದರಿಂದ ಆಕ್ರೋಶಗೊಂಡ ದೀಕ್ಷಿತಾ ಸಂಬಂಧಿಕರು ಆಸ್ಪತ್ರೆಯ ಗಾಜು ಪುಡಿಪುಡಿ ಮಾಡಿ, ಪೀಠೋಪಕರಣ ಧ್ವಂಸಗೊಳಿಸಿ ಕಟ್ಟಡದ ಮುಂಭಾಗ ಪ್ರತಿಭಟನೆ ನಡೆಸಿದರು.