<p><strong>ಹುಬ್ಬಳ್ಳಿ: </strong>ಹಿರಿಯ ಸಾಹಿತಿ ಪಾಟೀಲ ಪುಟ್ಟಪ್ಪನವರ ಅಂತಿಮ ನಮನ ಕಾರ್ಯದ ಸಿದ್ದತೆಗಳನ್ನು ಹುಬ್ಬಳ್ಳಿಯಲ್ಲಿ ವಿಶ್ವೇಶ್ವರನಗರದ ಅವರ ಸ್ವಗೃಹ ಪ್ರಪಂಚದಲ್ಲಿ ಕೈಕೊಳ್ಳಲಾಗುತ್ತಿದೆ.</p>.<p>ಕಿಮ್ಸ್ನಿಂದ ಬೆಳಿಗ್ಗೆ 9 ಗಂಟೆಗೆ ಪಾಪು ಪಾರ್ಥಿವ ಶರೀರವನ್ನು ಅವರ ಸ್ವಗೃಹ ತರಲಾಗುವುದು. ನಂತರ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು.</p>.<p>ಕಂದಾಯ, ಪೊಲೀಸ್ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳು ಅಂತಿಮ ನಮನದ ಸಿದ್ದತಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ.</p>.<p>ಪಾಪು ಅಂತಿಮ ದರ್ಶನಕ್ಕೆ ಬರುತ್ತಿರುವ ಸಾರ್ವಜನಿಕರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಮಾಜಿ ಸಂಸದ ಐ.ಜಿ. ಸನದಿ,ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಅಂತಿಮ ದರ್ಶನ ಪಡೆದರು.</p>.<p>ಸಿದ್ಧಾರೂಢ ಮಠ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸಂತರು ಧಾರ್ಮಿಕ ವಿಧಿವಿಧಾನದ ಮೂಲಕ, ಮಂತ್ರಘೋಷ ಹಾಕಿ ಪಾಪು ಅವರಿಗೆ ಅಂತಿಮ ನಮನ ಸಲ್ಲಿಸಿದರು.</p>.<p><a href="https://www.prajavani.net/district/dharwad/patil-puttappa-no-more-712843.html" target="_blank"><strong>ಇದನ್ನೂ ಓದಿ:‘ಪ್ರಪಂಚ’ಕ್ಕೆ ಪಾಪು ವಿದಾಯ: ಪಾಟೀಲ ಪುಟ್ಟಪ್ಪ ನಿಧನ</strong></a></p>.<p><strong><a href="https://www.prajavani.net/district/dharwad/remembering-patil-puttappa-712898.html" target="_blank">ಇದನ್ನೂ ಓದಿ:ಕನ್ನಡದ ಅಸ್ಮಿತೆಗೆ ಹೋರಾಡಿದ ಒಂಟಿ ಸಲಗ </a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಹಿರಿಯ ಸಾಹಿತಿ ಪಾಟೀಲ ಪುಟ್ಟಪ್ಪನವರ ಅಂತಿಮ ನಮನ ಕಾರ್ಯದ ಸಿದ್ದತೆಗಳನ್ನು ಹುಬ್ಬಳ್ಳಿಯಲ್ಲಿ ವಿಶ್ವೇಶ್ವರನಗರದ ಅವರ ಸ್ವಗೃಹ ಪ್ರಪಂಚದಲ್ಲಿ ಕೈಕೊಳ್ಳಲಾಗುತ್ತಿದೆ.</p>.<p>ಕಿಮ್ಸ್ನಿಂದ ಬೆಳಿಗ್ಗೆ 9 ಗಂಟೆಗೆ ಪಾಪು ಪಾರ್ಥಿವ ಶರೀರವನ್ನು ಅವರ ಸ್ವಗೃಹ ತರಲಾಗುವುದು. ನಂತರ ಮಧ್ಯಾಹ್ನ 12 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಲಾಗುವುದು.</p>.<p>ಕಂದಾಯ, ಪೊಲೀಸ್ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳು ಅಂತಿಮ ನಮನದ ಸಿದ್ದತಾ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ.</p>.<p>ಪಾಪು ಅಂತಿಮ ದರ್ಶನಕ್ಕೆ ಬರುತ್ತಿರುವ ಸಾರ್ವಜನಿಕರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಮಾಜಿ ಸಂಸದ ಐ.ಜಿ. ಸನದಿ,ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್ ಅಂತಿಮ ದರ್ಶನ ಪಡೆದರು.</p>.<p>ಸಿದ್ಧಾರೂಢ ಮಠ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಸಂತರು ಧಾರ್ಮಿಕ ವಿಧಿವಿಧಾನದ ಮೂಲಕ, ಮಂತ್ರಘೋಷ ಹಾಕಿ ಪಾಪು ಅವರಿಗೆ ಅಂತಿಮ ನಮನ ಸಲ್ಲಿಸಿದರು.</p>.<p><a href="https://www.prajavani.net/district/dharwad/patil-puttappa-no-more-712843.html" target="_blank"><strong>ಇದನ್ನೂ ಓದಿ:‘ಪ್ರಪಂಚ’ಕ್ಕೆ ಪಾಪು ವಿದಾಯ: ಪಾಟೀಲ ಪುಟ್ಟಪ್ಪ ನಿಧನ</strong></a></p>.<p><strong><a href="https://www.prajavani.net/district/dharwad/remembering-patil-puttappa-712898.html" target="_blank">ಇದನ್ನೂ ಓದಿ:ಕನ್ನಡದ ಅಸ್ಮಿತೆಗೆ ಹೋರಾಡಿದ ಒಂಟಿ ಸಲಗ </a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>