<p><strong>ಬೆಂಗಳೂರು:</strong> ‘ಅಕ್ರಮ ಬಾಂಗ್ಲಾ ವಲಸಿಗರೆಂಬ ಆರೋಪದಡಿ ನಗರದ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೆರವುಗೊಳಿಸಲಾದ ಜೋಪಡಿ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವ ದಿಸೆಯಲ್ಲಿ ಸಮಗ್ರ ಯೋಜನೆಯೊಂದನ್ನು ಸಿದ್ಧಪಡಿಸಿ ಕೋರ್ಟ್ಗೆ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ಈ ವೇಳೆ ಸರ್ಕಾರದ ಪರ ವಕೀಲರು, ‘ಘಟನೆಗೆ ಕಾರಣವಾಗಲು ತಪ್ಪು ಮಾಹಿತಿ ನೀಡಿದ ಮಾರತ್ತಹಳ್ಳಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್<br />ಬಿ.ಪಿ. ಗಿರೀಶ್ ಅವರನ್ನು ಅಮಾನತು ಮಾಡಲಾಗಿದೆ. ಜೋಪಡಿಗಳಲ್ಲಿ ಅಸ್ಸಾಂ ಮತ್ತು ತೆಲಂಗಾಣದ ಕೂಲಿ ಕಾರ್ಮಿಕರಿದ್ದರು ಎಂದು ಗುರುತಿಸ ಲಾ ಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಇದಕ್ಕೆ ನ್ಯಾಯಪೀಠ, ‘ಜೋಪಡಿ ನಿವಾಸಿಗಳು ತಮ್ಮ ಸೂರು ಕಳೆದುಕೊಳ್ಳಲು ಸರ್ಕಾರ ಮತ್ತು ಬಿಬಿಎಂಪಿಯೇ ಕಾರಣ. ನಿರಾಶ್ರಿತರ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿದೆ. ಆದ್ದರಿಂದ, ಯಾವ ವಿಧಾನದಲ್ಲಿ ಈ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸ ಬಹುದು, ತೆರವು ಕಾರ್ಯಾಚರಣೆ ಯಲ್ಲಿ ಯಾರೆಲ್ಲಾ ಸಂತ್ರಸ್ತರಾಗಿದ್ದಾರೆ ಎಂಬುದನ್ನು ಗುರುತಿಸಿ’ ಎಂದು ನಿರ್ದೇಶಿಸಿದೆ.</p>.<p>‘ಎರಡು ವಾರಗಳಲ್ಲಿ ತಾತ್ಕಾಲಿಕ ವಾಗಿ ಅವರಿಗೆ ಏನೆಲ್ಲಾ ವ್ಯವಸ್ಥೆ ಏನು ಕಲ್ಪಿಸಬಹುದು ಎಂಬ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೊತೆಗೆ ಪರಿಶೀಲನೆ ನಡೆಸಿ ನೆರವು ಕಲ್ಪಿಸಿ ಮತ್ತು ಈ ಕುರಿತ ಸಮಗ್ರ ಯೋಜನಾ ವರದಿಯನ್ನು ಒಂದು ತಿಂಗಳಲ್ಲಿ ಕೋರ್ಟ್ಗೆ ಸಲ್ಲಿಸಿ’ ಎಂದು ನಿರ್ದೇಶಿಸಿದೆ. ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಕ್ರಮ ಬಾಂಗ್ಲಾ ವಲಸಿಗರೆಂಬ ಆರೋಪದಡಿ ನಗರದ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೆರವುಗೊಳಿಸಲಾದ ಜೋಪಡಿ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವ ದಿಸೆಯಲ್ಲಿ ಸಮಗ್ರ ಯೋಜನೆಯೊಂದನ್ನು ಸಿದ್ಧಪಡಿಸಿ ಕೋರ್ಟ್ಗೆ ಸಲ್ಲಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.</p>.<p>ಈ ಕುರಿತಂತೆ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಕರ್ನಾಟಕ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.</p>.<p>ಈ ವೇಳೆ ಸರ್ಕಾರದ ಪರ ವಕೀಲರು, ‘ಘಟನೆಗೆ ಕಾರಣವಾಗಲು ತಪ್ಪು ಮಾಹಿತಿ ನೀಡಿದ ಮಾರತ್ತಹಳ್ಳಿ ಠಾಣೆ ಪೊಲೀಸ್ ಇನ್ಸ್ಪೆಕ್ಟರ್<br />ಬಿ.ಪಿ. ಗಿರೀಶ್ ಅವರನ್ನು ಅಮಾನತು ಮಾಡಲಾಗಿದೆ. ಜೋಪಡಿಗಳಲ್ಲಿ ಅಸ್ಸಾಂ ಮತ್ತು ತೆಲಂಗಾಣದ ಕೂಲಿ ಕಾರ್ಮಿಕರಿದ್ದರು ಎಂದು ಗುರುತಿಸ ಲಾ ಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.</p>.<p>ಇದಕ್ಕೆ ನ್ಯಾಯಪೀಠ, ‘ಜೋಪಡಿ ನಿವಾಸಿಗಳು ತಮ್ಮ ಸೂರು ಕಳೆದುಕೊಳ್ಳಲು ಸರ್ಕಾರ ಮತ್ತು ಬಿಬಿಎಂಪಿಯೇ ಕಾರಣ. ನಿರಾಶ್ರಿತರ ಮೂಲಭೂತ ಹಕ್ಕಿನ ಉಲ್ಲಂಘನೆ ಆಗಿದೆ. ಆದ್ದರಿಂದ, ಯಾವ ವಿಧಾನದಲ್ಲಿ ಈ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸ ಬಹುದು, ತೆರವು ಕಾರ್ಯಾಚರಣೆ ಯಲ್ಲಿ ಯಾರೆಲ್ಲಾ ಸಂತ್ರಸ್ತರಾಗಿದ್ದಾರೆ ಎಂಬುದನ್ನು ಗುರುತಿಸಿ’ ಎಂದು ನಿರ್ದೇಶಿಸಿದೆ.</p>.<p>‘ಎರಡು ವಾರಗಳಲ್ಲಿ ತಾತ್ಕಾಲಿಕ ವಾಗಿ ಅವರಿಗೆ ಏನೆಲ್ಲಾ ವ್ಯವಸ್ಥೆ ಏನು ಕಲ್ಪಿಸಬಹುದು ಎಂಬ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೊತೆಗೆ ಪರಿಶೀಲನೆ ನಡೆಸಿ ನೆರವು ಕಲ್ಪಿಸಿ ಮತ್ತು ಈ ಕುರಿತ ಸಮಗ್ರ ಯೋಜನಾ ವರದಿಯನ್ನು ಒಂದು ತಿಂಗಳಲ್ಲಿ ಕೋರ್ಟ್ಗೆ ಸಲ್ಲಿಸಿ’ ಎಂದು ನಿರ್ದೇಶಿಸಿದೆ. ವಿಚಾರಣೆಯನ್ನು ಇದೇ 26ಕ್ಕೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>