ಬೆಳಿಗ್ಗೆ 11ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿರುವ ರಾಷ್ಟ್ರಪತಿಗಳು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಆದಿ ಉಡುಪಿಯ ಹೆಲಿಪ್ಯಾಡ್ಗೆ ಬರಲಿದ್ದಾರೆ. 12ಕ್ಕೆ ಪೇಜಾವರ ಅಧೋಕ್ಷಜ ಮಠಕ್ಕೆ ಭೇಟಿ ನೀಡಿ ವಿಶ್ವೇಶತೀರ್ಥ ಶ್ರೀಗಳ ಜತೆ ಉಭಯ ಕುಶಲೋಪರಿ ನಡೆಸಿ, ಬಳಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಶ್ರೀಗಳನ್ನು ಸನ್ಮಾನಿಸಲಿದ್ದಾರೆ.12.45ಕ್ಕೆ ಶ್ರೀಕೃಷ್ಣಮಠಕ್ಕೆ ಭೇಟಿನೀಡಿ ಕೃಷ್ಣನ ದರ್ಶನ ಪಡೆದು ಹಿಂದಿರುಗಲಿದ್ದಾರೆ.