ಈ ಕುರಿತು ಟ್ವೀಟ್ ಮಾಡಿರುವ ಅವರು, ದುರಾದೃಷ್ಟವಶಾತ್ ಕೊರೊನಾ ಸೋಂಕಿತರು ಎಟಿಎಂಗಳಲ್ಲಿ ಹಣ ಡ್ರಾ ಮಾಡಿದರೆ ಅಮಾಯಕರು ಕೊರೊನಾಗೆ ಬಲಿ ಆಗುವ ಸಾಧ್ಯತೆಗಳಿವೆ. ಎಲ್ಲ ಬ್ಯಾಂಕುಗಳು ತುರ್ತಾಗಿ ಎಟಿಎಂಗಳಲ್ಲಿ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಹೇಳಿದ್ದಾರೆ.