ಈ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಆಯೋಗದ ಅಧ್ಯಕ್ಷ ಪ್ರಕಾಶ್ ಕಮ್ಮರಡಿ, ಬೇಗನೆ ಹಾಳಾಗುವ ತರಕಾರಿಗಳನ್ನು ಸರ್ಕಾರ ಮಧ್ಯ ಪ್ರವೇಶಿಸಿ ಖರೀದಿಸಿದರೂ ಬಳಿಕ ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡುವುದು ಕಷ್ಟ. ಇದರಿಂದ ರೈತರು ನಷ್ಟ ಅನುಭವಿಸುತ್ತಾರೆ. ಇದಕ್ಕೆ ಪರಿಹಾರವಾಗಿ ಕೃಷಿ ಉತ್ಪನ್ನಗಳನ್ನು ನೇರವಾಗಿ ಖರೀದಿಸುವುದರ ಬದಲಿಗೆ ಬೆಂಬಲ ಬೆಲೆ ಹಾಗೂ ರೈತರಿಗೆ ದೊರೆತ ಬೆಲೆಗಳ ನಡುವಿನ ವ್ಯತ್ಯಾಸದ ಮೊತ್ತವನ್ನು ಪಾವತಿಸುವುದು ಸೂಕ್ತ ಎಂದು ಹೇಳಿದ್ದಾರೆ.