<p><strong>ಕಾರವಾರ:</strong> ಜಿಲ್ಲೆಯಲ್ಲಿ ಒಂದು ವಾರ ವ್ಯಾಪಿಸಿದಪ್ರವಾಹದಿಂದ ಆಸ್ತಿಪಾಸ್ತಿಗಳಿಗೆ ಒಟ್ಟು ₹ 418 ಕೋಟಿ ಹಾನಿಯಾಗಿದೆ ಎಂದು ವಿವಿಧ ಇಲಾಖೆಗಳು ಜಿಲ್ಲಾಡಳಿತಕ್ಕೆಪ್ರಾಥಮಿಕ ವರದಿ ಸಲ್ಲಿಸಿವೆ.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗೀಲ್ ಈ ಕುರಿತು ಮಾಹಿತಿ ನೀಡಿದರು.</p>.<p>‘ಜಿಲ್ಲೆಯಲ್ಲಿ ಆ.1ರಿಂದ ಆ.12ರವರ ನಡುವೆ ಸರಾಸರಿ 95.8 ಸೆಂಟಿಮೀಟರ್ ಮಳೆಯಾಗಿದೆ. ಇದು ವಾಡಿಕೆಗಿಂತ ಶೇ 223ರಷ್ಟುಹೆಚ್ಚಾಗಿದೆ. 113 ಗ್ರಾಮಗಳು ಜಲಾವೃತವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. 6,200 ಜನರನ್ನುರಕ್ಷಿಸಲಾಗಿದೆ. ಪ್ರಸ್ತುತ 73 ಪರಿಹಾರ ಕೇಂದ್ರಗಳಲ್ಲಿ 8,561 ಜನರು ಆಶ್ರಯ ಪಡೆದಿದ್ದಾರೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಮಾತನಾಡಿ, ‘ಮುಂದಿನ 48 ಗಂಟೆಗಳಲ್ಲಿ ವಿದ್ಯುತ್, ಮೊಬೈಲ್ ಟವರ್ಗಳಿಗೆ ಮರು ಸಂಪರ್ಕ ಕೊಡುವ ಕೆಲಸಗಳು ಪೂರ್ಣಗೊಳ್ಳಲಿವೆ. ಆ.16ರಿಂದ ಬೆಳೆ ಸಮೀಕ್ಷೆ ನಡೆಸಲಾಗುವುದು’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1,005 ಕಿ.ಮೀ ರಸ್ತೆ ಹಾಗೂ 89 ಸೇತುವೆ, ಮೋರಿಗಳು ಹಾಗೂ 38 ಕೆರೆಗಳು ಹಾನಿಯಾಗಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಜಿಲ್ಲೆಯಲ್ಲಿ ಒಂದು ವಾರ ವ್ಯಾಪಿಸಿದಪ್ರವಾಹದಿಂದ ಆಸ್ತಿಪಾಸ್ತಿಗಳಿಗೆ ಒಟ್ಟು ₹ 418 ಕೋಟಿ ಹಾನಿಯಾಗಿದೆ ಎಂದು ವಿವಿಧ ಇಲಾಖೆಗಳು ಜಿಲ್ಲಾಡಳಿತಕ್ಕೆಪ್ರಾಥಮಿಕ ವರದಿ ಸಲ್ಲಿಸಿವೆ.</p>.<p>ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೀಷ್ ಮೌದ್ಗೀಲ್ ಈ ಕುರಿತು ಮಾಹಿತಿ ನೀಡಿದರು.</p>.<p>‘ಜಿಲ್ಲೆಯಲ್ಲಿ ಆ.1ರಿಂದ ಆ.12ರವರ ನಡುವೆ ಸರಾಸರಿ 95.8 ಸೆಂಟಿಮೀಟರ್ ಮಳೆಯಾಗಿದೆ. ಇದು ವಾಡಿಕೆಗಿಂತ ಶೇ 223ರಷ್ಟುಹೆಚ್ಚಾಗಿದೆ. 113 ಗ್ರಾಮಗಳು ಜಲಾವೃತವಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ. 6,200 ಜನರನ್ನುರಕ್ಷಿಸಲಾಗಿದೆ. ಪ್ರಸ್ತುತ 73 ಪರಿಹಾರ ಕೇಂದ್ರಗಳಲ್ಲಿ 8,561 ಜನರು ಆಶ್ರಯ ಪಡೆದಿದ್ದಾರೆ’ ಎಂದು ತಿಳಿಸಿದರು.</p>.<p>ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಮಾತನಾಡಿ, ‘ಮುಂದಿನ 48 ಗಂಟೆಗಳಲ್ಲಿ ವಿದ್ಯುತ್, ಮೊಬೈಲ್ ಟವರ್ಗಳಿಗೆ ಮರು ಸಂಪರ್ಕ ಕೊಡುವ ಕೆಲಸಗಳು ಪೂರ್ಣಗೊಳ್ಳಲಿವೆ. ಆ.16ರಿಂದ ಬೆಳೆ ಸಮೀಕ್ಷೆ ನಡೆಸಲಾಗುವುದು’ ಎಂದರು.</p>.<p>ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮೊಹಮ್ಮದ್ ರೋಶನ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1,005 ಕಿ.ಮೀ ರಸ್ತೆ ಹಾಗೂ 89 ಸೇತುವೆ, ಮೋರಿಗಳು ಹಾಗೂ 38 ಕೆರೆಗಳು ಹಾನಿಯಾಗಿವೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>