‘ಭಾರತದ ಇತಿಹಾಸದಲ್ಲಿ ನಾವು ಯಾರ ಮೇಲೂ ಯುದ್ಧ ಮಾಡಿಲ್ಲ, ಅತಿಕ್ರಮಣ ಕೂಡ ಮಾಡಲು ಹೋಗಿಲ್ಲ. ಬೇರೆ ದೇಶಗಳು ನಮ್ಮ ನೆಲದಲ್ಲಿ ದುಸ್ಸಾಹಸ ಮಾಡಲು ಪ್ರಯತ್ನಿಸಿದರೆ ತಕ್ಕ ಪಾಠ ಕಲಿಸದೇ ಬಿಡುವುದಿಲ್ಲ. ಒಂದು ಮನೆ ಹಾಗೂ ಮನೆತನಕ್ಕೆ ಸೇವೆಯನ್ನು ಮೀಸಲಿಟ್ಟಿರುವ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಸಿದ್ದರಾಮಯ್ಯ ಪ್ರಧಾನಿ ಬಗ್ಗೆ ಅಸಭ್ಯವಾಗಿ ಮಾಡಿದ ಟೀಕೆಗೆ ಪ್ರಧಾನಿ ತಮ್ಮ ಕಾರ್ಯದ ಮೂಲಕವೇ ಉತ್ತರ ಕೊಟ್ಟಿದ್ದಾರೆ’ ಎಂದು ತಿರುಗೇಟು ನೀಡಿದರು.