ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ 30 ವಿಚಾರಣಾಧೀನ ಕೈದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆ ಹಾಗೂ ಥಣಿಸಂದ್ರದ ಹಜ್ ಭವನಕ್ಕೆ ಭಾನುವಾರ ಸ್ಥಳಾಂತರಿಸಲಾಗಿದೆ.
ಹಲವು ಅಪರಾಧ ಪ್ರಕರಣಗಳಲ್ಲಿ ನಗರದ ಪೊಲೀಸರು ಬಂಧಿಸಿದ್ದ 100ಕ್ಕೂ ಹೆಚ್ಚು ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಅಂದಿನಿಂದಲೇ ಎಲ್ಲರನ್ನೂ ಕಾರಾಗೃಹದಲ್ಲಿರುವ ಪ್ರತ್ಯೇಕ ಕಟ್ಟಡದಲ್ಲಿ ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಅದಕ್ಕೆ ಸಿಬ್ಬಂದಿ ಕಾವಲು ಸಹ ಇತ್ತು.
ಈ ಹಿಂದೆ ಕಾರಾಗೃಹದ 26 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿತ್ತು. ಅದರಲ್ಲಿ ಸಿಬ್ಬಂದಿಯೂ ಇದ್ದರು. ಇದೀಗ ಪುನಃ 30 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದರಲ್ಲಿ ಒಬ್ಬರು ಮಹಿಳಾ ಕೈದಿ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.