<p><strong>ಬೆಂಗಳೂರು:</strong> ಹಾಸನ ಜಿಲ್ಲೆಯ ಶಾಂತಿಗ್ರಾಮದ 40 ಎಕರೆ ಗೋಮಾಳದಲ್ಲಿ ಜೈಲು ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಸೂಚಿಸಲಾಯಿತು.</p>.<p>ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಒತ್ತಡ ಹೇರಿ ಈ ಯೋಜನೆಯನ್ನು ಮಂಜೂರು ಮಾಡಿಸಿಕೊಂಡಿದ್ದಾರೆ. ಜತೆಗೆ, ₹657.8 ಕೋಟಿ ವೆಚ್ಚದ ಚಿಕ್ಕಮಗಳೂರು–ಬೇಲೂರು–ಸಕಲೇಶಪುರ ರೈಲು ಮಾರ್ಗಕ್ಕೆ ಒಪ್ಪಿಗೆ ನೀಡಲಾಯಿತು. ಇದರಲ್ಲಿ ರಾಜ್ಯದ ಪಾಲು ಶೇ 50 ಆಗಿದ್ದರೆ, ಉಳಿದ ಮೊತ್ತವನ್ನು ಕೇಂದ್ರ ಭರಿಸಲಿದೆ.</p>.<p>ಈ ತಿಂಗಳಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನ ಹಾಗೂ ಫೆಬ್ರುವರಿ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಬೇಕು ಎಂದು ಹೆಚ್ಚಿನ ಸಚಿವರು ಸಲಹೆ ನೀಡಿದರು. ಈ ಬಗ್ಗೆ ಮುಖ್ಯಮಂತ್ರಿ 2–3 ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಸುದ್ದಿಗಾರರಿಗೆ ತಿಳಿಸಿದರು.</p>.<p class="Subhead">ಇತರ ಪ್ರಮುಖ ನಿರ್ಧಾರಗಳು</p>.<p>* ವಿಜಯಪುರ ಜಿಲ್ಲೆಯ ತಿಕೋಟಾ ಹಾಗೂ ಇತರ 23 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹73.62 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ</p>.<p>* ಬೆಟ್ಟ ಕುರುಬ ಜಾತಿಯನ್ನು ಕಾಡು ಕುರುಬ ಜಾತಿಗೆ (ಪರಿಶಿಷ್ಟ ಪಂಗಡ) ಸಮಾನಾಂತರವಾಗಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧಾರ.</p>.<p>* ಆಲಮಟ್ಟಿ ಅಣೆಕಟ್ಟಿನ 1ನೇ ಪ್ಯಾಕೇಜ್ನಲ್ಲಿ ಶೇ 34.75ರ ಹೆಚ್ಚುವರಿ ಆರ್ಥಿಕ ಹೊಣೆಯ ₹7.66 ಕೋಟಿ ಮೊತ್ತಕ್ಕೆ ಅನುಮೋದನೆ</p>.<p>* ಶಿವಮೊಗ್ಗ ಜಿಲ್ಲಾ ಸಿಂಗನಮನೆ ಮೀಸಲು ಅರಣ್ಯದಿಂದ ಕುವೆಂಪು ವಿಶ್ವವಿದ್ಯಾಲಯಕ್ಕೆ ನೀಡಿರುವ ಅರಣ್ಯ ಜಮೀನಿಗೆ ಪರ್ಯಾಯವಾಗಿ ಚಿಕ್ಕಮಗಳೂರು ಜಿಲ್ಲೆಯ ಕೆಸವಿನಮನೆ ಗ್ರಾಮದ ಲ್ಯಾಂಡ್ ಬ್ಯಾಂಕ್ನಿಂದ 644 ಎಕರೆ 38 ಗುಂಟೆ ವರ್ಗಾವಣೆಗೆ ಒಪ್ಪಿಗೆ</p>.<p>* ಖಾಸಗಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 60 ನಾಡಕಚೇರಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ₹10 ಕೋಟಿ ಬಿಡುಗಡೆಗೆ ಅನುಮೋದನೆ</p>.<p>* ಅಂಗನವಾಡಿಗಳಿಗೆ ವೈದ್ಯಕೀಯ ಕಿಟ್ಗೆ ₹9.63 ಕೋಟಿ ಬಿಡುಗಡೆಗೆ ಒಪ್ಪಿಗೆ. ಪೂರ್ವ ಪ್ರಾಥಮಿಕ ಶೈಕ್ಷಣಿಕ ಕಿಟ್ಗೆ ₹19.77 ಕೋಟಿ</p>.<p>* 2019–20ನೇ ಶೈಕ್ಷಣಿಕ ವರ್ಷದಲ್ಲಿ ಒಂದರಿಂದ ಎಸ್ಸೆಸ್ಸೆಲ್ಸಿ ವರೆಗಿನ 44.57 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲು ₹77.64 ಕೋಟಿ ಮಂಜೂರು</p>.<p>* ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಿದ ಒಂದು ಸಾವಿರ ಮಂದಿಯನ್ನು ಗ್ರಾಮ ಪಂಚಾಯಿತಿ ಸಹಾಯಕರನ್ನಾಗಿ ಈ ಹಿಂದೆ ನೇಮಿಸಿಕೊಳ್ಳಲಾಗಿತ್ತು. ದ್ವಿತೀಯ ಪಿಯುಸಿ ಪೂರ್ಣಗೊಳಿಸದ ಕಾರಣ ಅವರ ಬಡ್ತಿಯನ್ನು ತಡೆ ಹಿಡಿಯಲಾಗಿತ್ತು. ಅವರಿಗೆ ಬಡ್ತಿ</p>.<p>* ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಚಿಕ್ಕೋಡಿ ತಾಲ್ಲೂಕಿನಲ್ಲಿ 54 ಕಿ.ಮೀ. ಪ್ರದೇಶಕ್ಕೆ ನೀರು ಹರಿಸುವ ₹139.55 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಾಸನ ಜಿಲ್ಲೆಯ ಶಾಂತಿಗ್ರಾಮದ 40 ಎಕರೆ ಗೋಮಾಳದಲ್ಲಿ ಜೈಲು ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಸೂಚಿಸಲಾಯಿತು.</p>.<p>ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಒತ್ತಡ ಹೇರಿ ಈ ಯೋಜನೆಯನ್ನು ಮಂಜೂರು ಮಾಡಿಸಿಕೊಂಡಿದ್ದಾರೆ. ಜತೆಗೆ, ₹657.8 ಕೋಟಿ ವೆಚ್ಚದ ಚಿಕ್ಕಮಗಳೂರು–ಬೇಲೂರು–ಸಕಲೇಶಪುರ ರೈಲು ಮಾರ್ಗಕ್ಕೆ ಒಪ್ಪಿಗೆ ನೀಡಲಾಯಿತು. ಇದರಲ್ಲಿ ರಾಜ್ಯದ ಪಾಲು ಶೇ 50 ಆಗಿದ್ದರೆ, ಉಳಿದ ಮೊತ್ತವನ್ನು ಕೇಂದ್ರ ಭರಿಸಲಿದೆ.</p>.<p>ಈ ತಿಂಗಳಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನ ಹಾಗೂ ಫೆಬ್ರುವರಿ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಬೇಕು ಎಂದು ಹೆಚ್ಚಿನ ಸಚಿವರು ಸಲಹೆ ನೀಡಿದರು. ಈ ಬಗ್ಗೆ ಮುಖ್ಯಮಂತ್ರಿ 2–3 ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಸುದ್ದಿಗಾರರಿಗೆ ತಿಳಿಸಿದರು.</p>.<p class="Subhead">ಇತರ ಪ್ರಮುಖ ನಿರ್ಧಾರಗಳು</p>.<p>* ವಿಜಯಪುರ ಜಿಲ್ಲೆಯ ತಿಕೋಟಾ ಹಾಗೂ ಇತರ 23 ಗ್ರಾಮಗಳ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ₹73.62 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ</p>.<p>* ಬೆಟ್ಟ ಕುರುಬ ಜಾತಿಯನ್ನು ಕಾಡು ಕುರುಬ ಜಾತಿಗೆ (ಪರಿಶಿಷ್ಟ ಪಂಗಡ) ಸಮಾನಾಂತರವಾಗಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧಾರ.</p>.<p>* ಆಲಮಟ್ಟಿ ಅಣೆಕಟ್ಟಿನ 1ನೇ ಪ್ಯಾಕೇಜ್ನಲ್ಲಿ ಶೇ 34.75ರ ಹೆಚ್ಚುವರಿ ಆರ್ಥಿಕ ಹೊಣೆಯ ₹7.66 ಕೋಟಿ ಮೊತ್ತಕ್ಕೆ ಅನುಮೋದನೆ</p>.<p>* ಶಿವಮೊಗ್ಗ ಜಿಲ್ಲಾ ಸಿಂಗನಮನೆ ಮೀಸಲು ಅರಣ್ಯದಿಂದ ಕುವೆಂಪು ವಿಶ್ವವಿದ್ಯಾಲಯಕ್ಕೆ ನೀಡಿರುವ ಅರಣ್ಯ ಜಮೀನಿಗೆ ಪರ್ಯಾಯವಾಗಿ ಚಿಕ್ಕಮಗಳೂರು ಜಿಲ್ಲೆಯ ಕೆಸವಿನಮನೆ ಗ್ರಾಮದ ಲ್ಯಾಂಡ್ ಬ್ಯಾಂಕ್ನಿಂದ 644 ಎಕರೆ 38 ಗುಂಟೆ ವರ್ಗಾವಣೆಗೆ ಒಪ್ಪಿಗೆ</p>.<p>* ಖಾಸಗಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 60 ನಾಡಕಚೇರಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ₹10 ಕೋಟಿ ಬಿಡುಗಡೆಗೆ ಅನುಮೋದನೆ</p>.<p>* ಅಂಗನವಾಡಿಗಳಿಗೆ ವೈದ್ಯಕೀಯ ಕಿಟ್ಗೆ ₹9.63 ಕೋಟಿ ಬಿಡುಗಡೆಗೆ ಒಪ್ಪಿಗೆ. ಪೂರ್ವ ಪ್ರಾಥಮಿಕ ಶೈಕ್ಷಣಿಕ ಕಿಟ್ಗೆ ₹19.77 ಕೋಟಿ</p>.<p>* 2019–20ನೇ ಶೈಕ್ಷಣಿಕ ವರ್ಷದಲ್ಲಿ ಒಂದರಿಂದ ಎಸ್ಸೆಸ್ಸೆಲ್ಸಿ ವರೆಗಿನ 44.57 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲು ₹77.64 ಕೋಟಿ ಮಂಜೂರು</p>.<p>* ಎಸ್ಸೆಸ್ಸೆಲ್ಸಿ ಪೂರ್ಣಗೊಳಿಸಿದ ಒಂದು ಸಾವಿರ ಮಂದಿಯನ್ನು ಗ್ರಾಮ ಪಂಚಾಯಿತಿ ಸಹಾಯಕರನ್ನಾಗಿ ಈ ಹಿಂದೆ ನೇಮಿಸಿಕೊಳ್ಳಲಾಗಿತ್ತು. ದ್ವಿತೀಯ ಪಿಯುಸಿ ಪೂರ್ಣಗೊಳಿಸದ ಕಾರಣ ಅವರ ಬಡ್ತಿಯನ್ನು ತಡೆ ಹಿಡಿಯಲಾಗಿತ್ತು. ಅವರಿಗೆ ಬಡ್ತಿ</p>.<p>* ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ಚಿಕ್ಕೋಡಿ ತಾಲ್ಲೂಕಿನಲ್ಲಿ 54 ಕಿ.ಮೀ. ಪ್ರದೇಶಕ್ಕೆ ನೀರು ಹರಿಸುವ ₹139.55 ಕೋಟಿ ವೆಚ್ಚದ ಯೋಜನೆಗೆ ಒಪ್ಪಿಗೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>