'ಕೈದಿ ಪತ್ತೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ. ಆತ ತಮಿಳುನಾಡಿನವನಾದ್ದರಿಂದ ಆ ಕಡೆಗೆ ಹೋಗಿರಬಹುದು. ಹೀಗಾಗಿ ಆ ಕಡೆಗೆ ಹಾಗೂ ಗೋವಾ, ಮಹಾರಾಷ್ಟ್ರ, ಬೆಂಗಳೂರು ಕಡೆಗೆ ತಂಡಗಳು ತೆರಳಿವೆ. ಎಲ್ಲ ಜಿಲ್ಲೆಗಳ ಪೊಲೀಸ್ ಠಾಣೆಗಳಿಗೂ ಮಾಹಿತಿ ಕಳುಹಿಸಿ, ಸಹಾಯ ಕೋರಲಾಗಿದೆ. ಹಲವು ಪ್ರಕರಣಗಳಲ್ಲಿ ಆತ ಬೇಕಾಗಿದ್ದಾನೆ. ಹೀಗಾಗಿ, ಗಂಭೀರವಾಗಿ ಪರಿಗಣಿಸಲಾಗಿದೆ' ಎಂದು ಹಿಂಡಲಗಾ ಕಾರಾಗೃಹದ ಮುಖ್ಯ ಸೂಪರಿಂಟೆಂಡೆಂಟ್ ಟಿ.ಪಿ. ಶೇಷ ಪ್ರಜಾವಾಣಿಗೆ ತಿಳಿಸಿದರು.