ಚಿತ್ರದುರ್ಗ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಟಿ.ಎ.ಲಿಂಗಾರೆಡ್ಡಿ, ‘ವಿವಿಧ ಬ್ಯಾಂಕ್ಗಳಲ್ಲಿ ಪಡೆದಿರುವ ಸಾಲಕ್ಕೆ ಬಡ್ಡಿ ರಹಿತವಾಗಿ ಕಂತುಗಳನ್ನು ಕಟ್ಟಲು ಅವಕಾಶ ಮಾಡಿಕೊಡಬೇಕು. ಕೈಗಾರಿಕೆ ಮತ್ತು ಮೀನುಗಾರಿಕೆಗೆ ನೀಡುವಂತೆ ಡಿಸೇಲ್ ಅನ್ನು ಸಾಮಾನ್ಯ ದರಕ್ಕಿಂತ ಪ್ರತಿ ಲೀಟರ್ಗೆ ₹10 ಕಡಿಮೆ ಮಾಡಿ, ನಮಗೆ ಮಾರಾಟ ಮಾಡಬೇಕು’ ಎಂದು ಮನವಿ ಮಾಡಿದರು.