<p><strong>ಬೆಂಗಳೂರು:</strong>ಸದಾಶಿವನಗರದ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಡಿ.ಕೆ.ಶಿವಕುಮಾರ್ ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.</p>.<p>‘ಎಸ್.ಎ.ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಕೋರಲು ಬಂದಿದ್ದೇನೆ. ಅವರೊಂದಿಗೆ ರಹಸ್ಯ ಮಾತುಕತೆಗಳೇನು ನಡೆಸಿಲ್ಲ. ನಾನು ತೆರೆದ ಪುಸ್ತಕವಿದ್ದಂತೆ. ಏನೇ ಮಾತನಾಡುವುದಿದ್ದರೂ ಬಹಿರಂಗವಾಗೇ ಆಡುತ್ತೇನೆ. ನಾನು ಯಾರಿಗೂ ಹೆದರುವುದಿಲ್ಲ’ ಎಂದು ಶಿವಕುಮಾರ್ ಹೇಳಿದರು.</p>.<p>ಡಿ.ಕೆ.ಶಿವಕುಮಾರ್ ಅವರು ಕೃಷ್ಣ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯಲ್ಲಿದ್ದಬಿಜೆಪಿ ಸಂಸದ ಪ್ರತಾಪ್ ಸಿಂಹ, ಅವರ ಕಾಲಿಗೆ ನಮಸ್ಕರಿಸಿದರು.</p>.<p>‘ನಾನು ಈಗ ಕಾಂಗ್ರೆಸ್ ವಕ್ತಾರನಲ್ಲ. ಕೇವಲ ಕಾರ್ಯಕರ್ತ, ಸಚಿವನಷ್ಟೇ. ನನ್ನ ವಿಷಯಕ್ಕೆ ಮಾತ್ರ ಪ್ರತಿಕ್ರಿಯೆ ನೀಡಬಲ್ಲೆ. ಬೇರೆಯವರ ವಿಷಯಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ’ ಎಂದುಜಿಟಿಡಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.</p>.<p>‘ಪ್ರತಿಯೊಬ್ಬರೂ ಮೈತ್ರಿ ಧರ್ಮ ಪಾಲನೆ ಮಾಡಲೇಬೇಕು. ನಾವಂತೂ ಪಾಲನೆ ಮಾಡಿದ್ದೇವೆ. ಅವರೂ ಪಾಲಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಸದಾಶಿವನಗರದ ಎಸ್.ಎಂ.ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಡಿ.ಕೆ.ಶಿವಕುಮಾರ್ ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.</p>.<p>‘ಎಸ್.ಎ.ಕೃಷ್ಣ ಅವರ ಹುಟ್ಟುಹಬ್ಬಕ್ಕೆ ಶುಭಕೋರಲು ಬಂದಿದ್ದೇನೆ. ಅವರೊಂದಿಗೆ ರಹಸ್ಯ ಮಾತುಕತೆಗಳೇನು ನಡೆಸಿಲ್ಲ. ನಾನು ತೆರೆದ ಪುಸ್ತಕವಿದ್ದಂತೆ. ಏನೇ ಮಾತನಾಡುವುದಿದ್ದರೂ ಬಹಿರಂಗವಾಗೇ ಆಡುತ್ತೇನೆ. ನಾನು ಯಾರಿಗೂ ಹೆದರುವುದಿಲ್ಲ’ ಎಂದು ಶಿವಕುಮಾರ್ ಹೇಳಿದರು.</p>.<p>ಡಿ.ಕೆ.ಶಿವಕುಮಾರ್ ಅವರು ಕೃಷ್ಣ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮನೆಯಲ್ಲಿದ್ದಬಿಜೆಪಿ ಸಂಸದ ಪ್ರತಾಪ್ ಸಿಂಹ, ಅವರ ಕಾಲಿಗೆ ನಮಸ್ಕರಿಸಿದರು.</p>.<p>‘ನಾನು ಈಗ ಕಾಂಗ್ರೆಸ್ ವಕ್ತಾರನಲ್ಲ. ಕೇವಲ ಕಾರ್ಯಕರ್ತ, ಸಚಿವನಷ್ಟೇ. ನನ್ನ ವಿಷಯಕ್ಕೆ ಮಾತ್ರ ಪ್ರತಿಕ್ರಿಯೆ ನೀಡಬಲ್ಲೆ. ಬೇರೆಯವರ ವಿಷಯಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ’ ಎಂದುಜಿಟಿಡಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.</p>.<p>‘ಪ್ರತಿಯೊಬ್ಬರೂ ಮೈತ್ರಿ ಧರ್ಮ ಪಾಲನೆ ಮಾಡಲೇಬೇಕು. ನಾವಂತೂ ಪಾಲನೆ ಮಾಡಿದ್ದೇವೆ. ಅವರೂ ಪಾಲಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದಷ್ಟೇ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>