ಉಗಾಂಡದಲ್ಲಿ ಭಾರತದ ಪರ ಕಾಗೇರಿ ವಾದ

ಬೆಂಗಳೂರು: ಉಗಾಂಡದಲ್ಲಿ ನಡೆದ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ನ (ಸಿಪಿಎ) 64 ನೇ ಸಮ್ಮೇಳನದಲ್ಲಿ ಕಾಶ್ಮೀರ ವಿಷಯ ಪ್ರಸ್ತಾಪಿಸಿದ ಪಾಕಿಸ್ತಾನಕ್ಕೆ ಕರ್ನಾಟಕ ವಿಧಾನಸಭಾಧ್ಯಕ್ಷ
ವಿಶ್ವೇಶ್ವರ ಹೆಗಡೆ ಕಾಗೇರಿ ತಿರುಗೇಟು ನೀಡಿದ್ದಾರೆ.
ಇದೇ 28ರಂದು ನಡೆದ ಸಮ್ಮೇಳನದಲ್ಲಿ ಮಾತನಾಡಿದ ಪಾಕಿಸ್ತಾನದ ಪ್ರತಿನಿಧಿ, ‘ಕಾಶ್ಮೀರ
ದಲ್ಲಿ ಸೇನಾಡಳಿತವಿದ್ದು, ಪ್ರಜಾಪ್ರಭುತ್ವ ಇಲ್ಲ’ ಎಂದು ಟೀಕಿಸಿದರು.
ಆಗ ಮಧ್ಯ ಪ್ರವೇಶಿಸಿದ ಕಾಗೇರಿ, ‘ಕಾಶ್ಮೀರ ಭಾರತದ ಆಂತರಿಕ ವಿಷಯ. ಅಲ್ಲಿ ರಾಜ್ಯಪಾಲರ ಆಡಳಿತ ಇದೆ ವಿನಃ ಸೈನಿಕ ಆಡಳಿತವಿಲ್ಲ’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.