ದೇಶದ್ರೋಹ ಪ್ರಕರಣದ ಆರೋಪದ ಮೇಲೆ ಕೆಎಲ್ಇ ಎಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಕೋರ್ಟ್ಗೆ ಕರೆತರಲಾಗಿತ್ತು. ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ಮೇಲೆ ಅವರನ್ನು ಕರೆದೊಯ್ಯುವಾಗ ಕೆಲವರು ಹಲ್ಲೆ ನಡೆಸಿದ್ದರು. ಪೊಲೀಸ್ ವ್ಯಾನ್ಗೆ ಬೂಟು, ಚಪ್ಪಲಿ ಎಸೆದಿದ್ದರು ಎಂದು ದೂರಿನಲ್ಲಿ ದಾಖಲಿಸಲಾಗಿದೆ.