ರಾಮಪ್ಪ ಅವರ ಗೆಲುವು ಪ್ರಕಟವಾಗುತ್ತಿದ್ದಂತೆ, ನಗರದ ಹಳ್ಳದಕೇರಿಯಲ್ಲಿ ರಾಮಪ್ಪ ಮನೆಯ ಬಳಿ ಹಾಗೂ ಕಾಂಗ್ರೆಸ್ ಕಚೇರಿಯ ಬಳಿ ಮುಖಂಡರು, ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬೈಕ್ ರ್ಯಾಲಿ ನಡೆಸಿ, ಕಾಂಗ್ರೆಸ್ ಮತ್ತು ರಾಮಪ್ಪ ಪರ ಘೋಷಣೆಗಳನ್ನು ಕೂಗಿದರು.