<p><strong>ಬೆಂಗಳೂರು: ‘</strong>ಸರ್ಕಾರ ನೀಡುತ್ತಿರುವ ಅಕ್ಕಿಯನ್ನು ಕೆ.ಜಿಗೆ ₹12ರಿಂದ ₹15 ಕ್ಕೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ.<br />ನಾವು ಬಡವರಿಗೆ ಕೋಟ್ಯಂತರ ರೂಪಾಯಿಹಣ ಖರ್ಚು ಮಾಡಿ ಪಡಿತರ ಒದಗಿಸುತ್ತಿದ್ದೇವೆ.ಇದನ್ನು ದುರ್ಬಳಕೆ ಮಾಡಿಕೊಳ್ಳುವುದು ತಪ್ಪು. ಇದಕ್ಕೆ ಸಂಬಂಧಿಸಿ ಕಾನೂನು ತರಲು ಅಧಿಕಾರಿಗಳು ಮತ್ತು ಸಿಎಂ ಜತೆ ಮಾತನಾಡುತ್ತೇನೆ’ ಎಂದು ಆಹಾರಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಕೆ.ಗೋಪಾಲಯ್ಯ ಹೇಳಿದರು.</p>.<p>ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಅವರು,ರಾಜ್ಯ ಮತ್ತು ಕೇಂದ್ರದ ನಾನಾ ಯೋಜನೆ ಅಡಿ ನೀಡುತ್ತಿರುವ ಪಡಿತರವನ್ನು ಮಾರಾಟ ಮಾಡಲು ಮುಂದಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದರು.</p>.<p>‘ಸಾಕಷ್ಟು ಮಂದಿ ಈ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ದೂರು ಬಂದಿದೆ. ಜನರಿಗೆ ಪಡಿತರ ಹೆಚ್ಚಾದರೆ ಅದನ್ನು ಅಂಗಡಿಯಲ್ಲೇ ಬಿಡಿ. ಬಡವರಿಗೆ ಅನುಕೂಲ ಆಗುತ್ತದೆ. ಅದನ್ನು ಬಿಟ್ಟು ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳಬೇಡಿ. ಇಂಥವರ ಪಡಿತರ ರದ್ದು ಮಾಡಲೂ ಸಹ ಕಾನೂನನಿನಲ್ಲಿ ಅವಕಾಶ ನೀಡಲು ಚಿಂತನೆ ನಡೆದಿದೆ’ಎಂದರು.</p>.<p>‘ಮೇಲ್ನೋಟಕ್ಕೆ ಪಡಿತರ ದುರ್ಬಳಕೆ ಮಾಡಿಕೊಂಡಿರುವ 499 ಅಂಗಡಿಗಳಿಗೆ ನೋಟಿಸ್ ನೀಡಿದ್ದೇವೆ. 33 ಲೈಸೆನ್ಸ್ಗಳನ್ನು ರದ್ದು ಮಾಡಿದ್ದೇವೆ. ಕಲಬುರ್ಗಿ, ಮೈಸೂರು ಮತ್ತು ದಾವಣಗೆರೆಗಳ ಖಾಸಗಿ ಗೋದಾಮುಗಳ ಮೇಲೆ ನಮ್ಮ ಅಧಿಕಾರಿಗಳು ದಾಳಿ ನಡೆಸಿ ಸಾವಿರಾರು ಕ್ಚಿಂಟಲ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಈ ಅಕ್ಕಿ ಎಲ್ಲಿಂದ ಬಂತು ಎಂಬ ಬಗ್ಗೆತನಿಖೆ ನಡೆಸಿ ವರದಿ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ಎಂದರು.</p>.<p>ತಪ್ಪಿತಸ್ಥರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಹೇಳಿದ ಅವರು, ‘ಎಷ್ಟೇ ಪ್ರಭಾವಿ ಇದ್ದರೂ ಅಂಥವರನ್ನು ಕ್ಷಮಿಸುವುದಿಲ್ಲ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಸರ್ಕಾರ ನೀಡುತ್ತಿರುವ ಅಕ್ಕಿಯನ್ನು ಕೆ.ಜಿಗೆ ₹12ರಿಂದ ₹15 ಕ್ಕೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ.<br />ನಾವು ಬಡವರಿಗೆ ಕೋಟ್ಯಂತರ ರೂಪಾಯಿಹಣ ಖರ್ಚು ಮಾಡಿ ಪಡಿತರ ಒದಗಿಸುತ್ತಿದ್ದೇವೆ.ಇದನ್ನು ದುರ್ಬಳಕೆ ಮಾಡಿಕೊಳ್ಳುವುದು ತಪ್ಪು. ಇದಕ್ಕೆ ಸಂಬಂಧಿಸಿ ಕಾನೂನು ತರಲು ಅಧಿಕಾರಿಗಳು ಮತ್ತು ಸಿಎಂ ಜತೆ ಮಾತನಾಡುತ್ತೇನೆ’ ಎಂದು ಆಹಾರಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಕೆ.ಗೋಪಾಲಯ್ಯ ಹೇಳಿದರು.</p>.<p>ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಅವರು,ರಾಜ್ಯ ಮತ್ತು ಕೇಂದ್ರದ ನಾನಾ ಯೋಜನೆ ಅಡಿ ನೀಡುತ್ತಿರುವ ಪಡಿತರವನ್ನು ಮಾರಾಟ ಮಾಡಲು ಮುಂದಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದರು.</p>.<p>‘ಸಾಕಷ್ಟು ಮಂದಿ ಈ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ದೂರು ಬಂದಿದೆ. ಜನರಿಗೆ ಪಡಿತರ ಹೆಚ್ಚಾದರೆ ಅದನ್ನು ಅಂಗಡಿಯಲ್ಲೇ ಬಿಡಿ. ಬಡವರಿಗೆ ಅನುಕೂಲ ಆಗುತ್ತದೆ. ಅದನ್ನು ಬಿಟ್ಟು ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳಬೇಡಿ. ಇಂಥವರ ಪಡಿತರ ರದ್ದು ಮಾಡಲೂ ಸಹ ಕಾನೂನನಿನಲ್ಲಿ ಅವಕಾಶ ನೀಡಲು ಚಿಂತನೆ ನಡೆದಿದೆ’ಎಂದರು.</p>.<p>‘ಮೇಲ್ನೋಟಕ್ಕೆ ಪಡಿತರ ದುರ್ಬಳಕೆ ಮಾಡಿಕೊಂಡಿರುವ 499 ಅಂಗಡಿಗಳಿಗೆ ನೋಟಿಸ್ ನೀಡಿದ್ದೇವೆ. 33 ಲೈಸೆನ್ಸ್ಗಳನ್ನು ರದ್ದು ಮಾಡಿದ್ದೇವೆ. ಕಲಬುರ್ಗಿ, ಮೈಸೂರು ಮತ್ತು ದಾವಣಗೆರೆಗಳ ಖಾಸಗಿ ಗೋದಾಮುಗಳ ಮೇಲೆ ನಮ್ಮ ಅಧಿಕಾರಿಗಳು ದಾಳಿ ನಡೆಸಿ ಸಾವಿರಾರು ಕ್ಚಿಂಟಲ್ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಈ ಅಕ್ಕಿ ಎಲ್ಲಿಂದ ಬಂತು ಎಂಬ ಬಗ್ಗೆತನಿಖೆ ನಡೆಸಿ ವರದಿ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ಎಂದರು.</p>.<p>ತಪ್ಪಿತಸ್ಥರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ಹೇಳಿದ ಅವರು, ‘ಎಷ್ಟೇ ಪ್ರಭಾವಿ ಇದ್ದರೂ ಅಂಥವರನ್ನು ಕ್ಷಮಿಸುವುದಿಲ್ಲ’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>