ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ ಕಾಯ್ದೆ ಬೆಂಬಲಿಸಿ ರಾಮನಗರದಲ್ಲಿ ಮೆರವಣಿಗೆ

Last Updated 4 ಜನವರಿ 2020, 6:32 IST
ಅಕ್ಷರ ಗಾತ್ರ

ರಾಮನಗರ: ಪೌರತ್ವ ತಿದ್ದುಪಡಿ‌ ಕಾಯ್ದೆ ಬೆಂಬಲಿಸಿ ರಾಷ್ಟ್ರೀಯ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಶನಿವಾರ ಬೃಹತ್ ಜಾಥಾ ನಡೆಯಿತು.

ಇಲ್ಲಿನ ಕೆಂಪೇಗೌಡ ವೃತ್ತದಲ್ಲಿ ಚಾಲನೆ ನೀಡಲಾಯಿತು. ಅಲ್ಲಿಂದ ಮೆರವಣಿಗೆಯು ಬಸ್ ನಿಲ್ದಾಣ, ಎಂ.ಜಿ. ರಸ್ತೆ ಮೂಲಕ ಜ್ಯೂನಿಯರ್ ಕಾಲೇಜು ಮೈದಾನದವರೆಗೆ ಸಾಗಿತು.

ಮೆರವಣಿಗೆ ಉದ್ದಕ್ಕೂ ಜನರು ರಾಷ್ಟ್ರ ಧ್ವಜ, ಓಂ ಲಾಂಛನವುಳ್ಳ‌ ಧ್ವಜಗಳನ್ನು ಹಿಡಿದು ಸಾಗಿದರು. ನಾಲ್ಕು ತಾಲ್ಲೂಕುಗಳ ಬಿಜೆಪಿ ಕಾರ್ಯಕರ್ತರು, ಆರ್ ಎಸ್ ಎಸ್, ಎಬಿವಿಪಿ, ಹಿಂದೂ‌ ಜಾಗರಣಾ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT