<p><strong>ಬಳ್ಳಾರಿ:</strong> ಕೊರೊನಾ ಸೋಂಕು ಹೆಚ್ಚು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಮತ್ತು ತೆಲಂಗಾಣದ ಜನರು ಜಿಲ್ಲೆಯಲ್ಲಿ ಮುಕ್ತವಾಗಿ ಸಂಚರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>‘ಜಿಲ್ಲೆಯಲ್ಲಿ ದಿನವೂ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಸೋಂಕಿತರಲ್ಲಿ ಆಂಧ್ರ ಮತ್ತು ತೆಲಂಗಾಣದವರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಈ ಎರಡೂ ರಾಜ್ಯದ ಜನರ ಅಂತರರಾಜ್ಯ ಪ್ರಯಾಣವನ್ನು ನಿರ್ಬಂಧಿಸಲಾಗಿದೆ. ಸೇವಾಸಿಂಧು ಪಾಸ್ ಉಳ್ಳವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುವುದು. ಸರಕುಸಾಗಣೆ ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ’ ಎಂದು ಆದೇಶದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಆಂಧ್ರದ ಆದೋನಿ, ಆಲೂರು, ಕರ್ನೂರು, ಅನಂತಪುರದ ಮೂಲದ ಜನರೂ ಜಿಲ್ಲೆಯಲ್ಲಿ ತಪಾಸಣೆಗೆ ಒಳಗಾದ ಬಳಿಕ ಸೋಂಕು ದೃಢಪಟ್ಟಿದೆ. ಈ ಊರುಗಳಿಂದ ಜಿಲ್ಲೆಗೆ ವಾಪಸಾದ ಹಲವರಿಗೂ ಸೋಂಕು ತಗುಲಿದೆ. ಅವರ ಮೂಲಕ ಸ್ಥಳೀಯ ನಿವಾಸಿಗಳಲ್ಲೂ ಸೋಂಕು ಹಬ್ಬುವ ಭೀತಿಯೂ ಮೂಡಿದೆ.</p>.<p>‘ಪ್ರಸಕ್ತ ಸನ್ನಿವೇಶವನ್ನು ನಿಯಂತ್ರಿಸಲು ಅಂತರರಾಜ್ಯ ಸಂಚಾರವನ್ನು ನಿರ್ಬಂಧಿಸಲೇಬೇಕಾಗಿದೆ. ಸೋಂಕು ಹಬ್ಬದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿರುವುದರಿಂದ ಆದೇಶ ಹೊರಡಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p><strong>ವಾಹನಗಳಿಗೆ ತಡೆ ಇಲ್ಲ:</strong> ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ವಾಹನಗಳ ಸಂಚಾರಕ್ಕೆ ನಿಷೇಧ ಹೇರಿಲ್ಲ. ಆದರೆ ಎರಡೂ ರಾಜ್ಯಗಳ ಜನರ ಜನರ ಪ್ರವೇಶಕ್ಕೆ ತಡೆ ಒಡ್ಡಲಾಗುವುದು. ಇ ಪಾಸ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಕೊರೊನಾ ಸೋಂಕು ಹೆಚ್ಚು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಆಂಧ್ರ ಮತ್ತು ತೆಲಂಗಾಣದ ಜನರು ಜಿಲ್ಲೆಯಲ್ಲಿ ಮುಕ್ತವಾಗಿ ಸಂಚರಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>‘ಜಿಲ್ಲೆಯಲ್ಲಿ ದಿನವೂ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಸೋಂಕಿತರಲ್ಲಿ ಆಂಧ್ರ ಮತ್ತು ತೆಲಂಗಾಣದವರೂ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಈ ಎರಡೂ ರಾಜ್ಯದ ಜನರ ಅಂತರರಾಜ್ಯ ಪ್ರಯಾಣವನ್ನು ನಿರ್ಬಂಧಿಸಲಾಗಿದೆ. ಸೇವಾಸಿಂಧು ಪಾಸ್ ಉಳ್ಳವರಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗುವುದು. ಸರಕುಸಾಗಣೆ ವಾಹನಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ’ ಎಂದು ಆದೇಶದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.</p>.<p>ಆಂಧ್ರದ ಆದೋನಿ, ಆಲೂರು, ಕರ್ನೂರು, ಅನಂತಪುರದ ಮೂಲದ ಜನರೂ ಜಿಲ್ಲೆಯಲ್ಲಿ ತಪಾಸಣೆಗೆ ಒಳಗಾದ ಬಳಿಕ ಸೋಂಕು ದೃಢಪಟ್ಟಿದೆ. ಈ ಊರುಗಳಿಂದ ಜಿಲ್ಲೆಗೆ ವಾಪಸಾದ ಹಲವರಿಗೂ ಸೋಂಕು ತಗುಲಿದೆ. ಅವರ ಮೂಲಕ ಸ್ಥಳೀಯ ನಿವಾಸಿಗಳಲ್ಲೂ ಸೋಂಕು ಹಬ್ಬುವ ಭೀತಿಯೂ ಮೂಡಿದೆ.</p>.<p>‘ಪ್ರಸಕ್ತ ಸನ್ನಿವೇಶವನ್ನು ನಿಯಂತ್ರಿಸಲು ಅಂತರರಾಜ್ಯ ಸಂಚಾರವನ್ನು ನಿರ್ಬಂಧಿಸಲೇಬೇಕಾಗಿದೆ. ಸೋಂಕು ಹಬ್ಬದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿರುವುದರಿಂದ ಆದೇಶ ಹೊರಡಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.</p>.<p><strong>ವಾಹನಗಳಿಗೆ ತಡೆ ಇಲ್ಲ:</strong> ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ‘ವಾಹನಗಳ ಸಂಚಾರಕ್ಕೆ ನಿಷೇಧ ಹೇರಿಲ್ಲ. ಆದರೆ ಎರಡೂ ರಾಜ್ಯಗಳ ಜನರ ಜನರ ಪ್ರವೇಶಕ್ಕೆ ತಡೆ ಒಡ್ಡಲಾಗುವುದು. ಇ ಪಾಸ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>