ಕೊರೊನಾ ಸೋಂಕು ದೃಢಪಟ್ಟರೂ ಸಹಕರಿಸದ ಬಿಬಿಎಂಪಿ ಸದಸ್ಯನವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶ್ರೀರಾಮುಲು, ‘ಅವರನಡವಳಿಕೆಯನ್ನು ಸರ್ಕಾರ ಸಹಿಸಲ್ಲ. ಕೊರೊನಾ ಸೋಂಕು ದೃಢಪಟ್ಟ ಬಳಿಕ ಅವರು ಸಹಕರಿಸಲೇಬೇಕು. ತಕ್ಷಣ ಆಸ್ಪತ್ರೆಗೆ ದಾಖಲಾಗಬೇಕು. ಈ ರೀತಿ ತಪ್ಪಿಸಿಕೊಳ್ಳುವುದು ಸರಿಯಲ್ಲ. ಅವರು ದಾಖಲಾಗದಿದ್ದರೆ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.