‘ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿಯಲ್ಲಿರುವ ₹ 8,000 ಕೋಟಿ ಮೊತ್ತದ ನಿಧಿ ಬಳಸಿ ಆಹಾರ ಪೊಟ್ಟಣಗಳನ್ನು ಬಿಜೆಪಿ ಶಾಸಕರು ಮತ್ತು ಮಹಾನಗರ ಪಾಲಿಕೆ ಸದಸ್ಯರು ಬೇಕಾಬಿಟ್ಟಿಯಾಗಿ ವಿತರಿಸುತ್ತಿದ್ದಾರೆ. ತಮ್ಮ ಭಾವಚಿತ್ರ ಮತ್ತು ಹೆಸರಿರುವ ಲೇಬಲ್ ಹಚ್ಚಿ ತಮ್ಮ ಮತದಾರರಿರುವ ಪ್ರದೇಶದಲ್ಲಿ ವಿತರಿಸುತ್ತಿದ್ದಾರೆ. ಕಾರ್ಮಿಕ ಸಂಘಗಳನ್ನು ಹೊರಗಿಟ್ಟು ಈ ಯೋಜನೆ ಅನುಷ್ಠಾನದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಸೇರಿಸಿಕೊಂಡಿದ್ದಾರೆ’ ಎಂದು ಅವರು ಆರೋಪಿಸಿದ್ದಾರೆ.