ಹಿಂಬಡ್ತಿಗೆ ಒಳಗಾದ ಎಸ್.ಸಿ, ಎಸ್.ಟಿ ನೌಕರರಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಫೆ. 27ರಂದು ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಮಾರ್ಚ್ 1ರಂದು ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಆದರೆ, ಕರ್ನಾಟಕ ವಿಶ್ವವಿದ್ಯಾಲಯ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳಲ್ಲಿ ಫೆ. 27 ಮತ್ತು 28ರಂದು ಹಲವು ಅಧಿಕಾರಿಗಳ ಹಿಂಬಡ್ತಿ ವಾಪಸು ಪಡೆದು ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ.