ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಲ್ಲಿ ಶುಕ್ರವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಏಕರೂಪ ತಂತ್ರಾಂಶ ಅಳವಡಿಕೆಗೆ ಚಾಲನೆ ನೀಡಿ ಮಾತನಾಡಿ, ‘ಎಪಿಎಂಸಿ ಕಾಯ್ದೆ ತಿದ್ದುಪಡಿ ಬಳಿಕ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮುಕ್ತ ಅವಕಾಶವಿದೆ. ಬೇರೆ ಕಡೆ ಸೆಸ್ ಇಲ್ಲ. ಆದ್ದರಿಂದ ಎಪಿಎಂಸಿ ಸೆಸ್ ಕಡಿತ ಮಾಡುವಂತೆ ವರ್ತಕರು ಬೇಡಿಕೆ ಇಟ್ಟಿದ್ದಾರೆ’ ಎಂದರು.