ಬಲ ಪ್ರದರ್ಶನ: ನಗರದ ಓವಲ್ ಮೈದಾನದಲ್ಲಿ ಕಾಯ್ದೆಯ ಪರವಾಗಿ ಬಿಜೆಪಿ ಹಾಗೂ ಇತರ ಸಂಘಟನೆಗಳು ಬಲ ಪ್ರದರ್ಶನ ನಡೆಸಿದವು. ಶಾಸಕ ಎಸ್.ಎ.ರಾಮದಾಸ್, ಬಿಜೆಪಿ ಮುಖಂಡ ಬಿ.ಪಿ.ಮಂಜುನಾಥ್ ಸೇರಿದಂತೆ ಹಲವರು ಭಾಗಿಯಾದರು. ಕೇಂದ್ರ ಸರ್ಕಾರ ಹಾಗೂ ಕಾಯ್ದೆಯ ಪರ ಘೋಷಣೆಗಳನ್ನು ಕೂಗಿದರು. ಸ್ಥಳಕ್ಕೆ ಬಂದ ಪೊಲೀಸರು ಇವರ ಮನವೊಲಿಸಿ ವಾಪಸ್ ಕಳುಹಿಸಿದರು.