<p>ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರುದ್ಧ ಶನಿವಾರ ಪುರಭವನದ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು, ಇಂತಹ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುತ್ತಿರುವುದರ ವಿರುದ್ಧ ಮೌನಾಭಿನಯದ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಾವು ಭಾರತೀಯರು’ ಸಂಘಟನೆ ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಯುವಕ–ಯುವತಿಯರು ಏರುಧ್ವನಿಯಲ್ಲಿ ಘೋಷಣೆಗಳನ್ನು ಕೂಗಿದರು. ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿದ್ದರಿಂದ ಯಾರಿಗೆ ಅನ್ಯಾಯವಾಗಿದೆ. ಇದರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಬಲ ಪ್ರಯೋಗ ನಡೆಸುತ್ತಿದೆ ಎಂಬುದನ್ನು ವಿದ್ಯಾರ್ಥಿನಿಯರು ಮೌನ ರೂಪಕದ ಮೂಲಕ ಕಟ್ಟಿಕೊಟ್ಟರು.</p>.<p>ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆಡಳಿತ ವೈಖರಿಯನ್ನು ಟೀಕಿಸುವ ಹಾಡುಗಳನ್ನು ಗಾಯಕರು ಹಾಡಿದಾಗ ಪ್ರತಿಭಟನಕಾರರೆಲ್ಲ ಧ್ವನಿಗೂಡಿಸಿದರು.</p>.<p>ಸಿಎಎ ಮತ್ತು ಎನ್ಆರ್ಸಿ ವಿರುದ್ಧದ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ‘ಧರ್ಮ, ಜಾತಿ ಆಧಾರದಲ್ಲಿ ತಾರತಮ್ಯ ಮಾಡುವುದು ಸಂವಿಧಾನಕ್ಕೆವಿರುದ್ಧವಾದ ನಡೆ. ಈ ಹೋರಾಟ ಯಾರ ವಿರುದ್ಧವೂ ಅಲ್ಲ. ಸಂವಿಧಾನವನ್ನು ಉಳಿಸುವ ಸಲುವಾಗಿ ಈ ನಡೆ ಅನಿವಾರ್ಯ’ ಎಂದು ಸ್ಪಷ್ಟಪಡಿಸಿದರು.</p>.<p>‘ಮಹಿಳೆಯರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸುವುದು ನಮ್ಮ ಉದ್ದೇಶವಾಗಿರಲಿಲ್ಲ. ಆದರೂ, ವಿದ್ಯಾರ್ಥಿನಿಯರೇ ಹೆಚ್ಚಾಗಿ ಬಂದಿದ್ದಾರೆ. ಸಿಎಎ ಮತ್ತು ಎನ್ಆರ್ಸಿಯಿಂದ ಮಹಿಳೆಯರೇ ಹೆಚ್ಚು ತೊಂದರೆ ಅನುಭವಿಸಲಿದ್ದಾರೆ’ ಎಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್ನ(ಎಸ್ಐಒ) ರಾಜ್ಯ ಘಟಕದ ಅಧ್ಯಕ್ಷೆ ಉಮೈರಾ ಬಾನು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರುದ್ಧ ಶನಿವಾರ ಪುರಭವನದ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿನಿಯರು, ಇಂತಹ ಹೋರಾಟಗಳನ್ನು ಸರ್ಕಾರ ಹತ್ತಿಕ್ಕುತ್ತಿರುವುದರ ವಿರುದ್ಧ ಮೌನಾಭಿನಯದ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಾವು ಭಾರತೀಯರು’ ಸಂಘಟನೆ ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಯುವಕ–ಯುವತಿಯರು ಏರುಧ್ವನಿಯಲ್ಲಿ ಘೋಷಣೆಗಳನ್ನು ಕೂಗಿದರು. ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿದ್ದರಿಂದ ಯಾರಿಗೆ ಅನ್ಯಾಯವಾಗಿದೆ. ಇದರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಬಲ ಪ್ರಯೋಗ ನಡೆಸುತ್ತಿದೆ ಎಂಬುದನ್ನು ವಿದ್ಯಾರ್ಥಿನಿಯರು ಮೌನ ರೂಪಕದ ಮೂಲಕ ಕಟ್ಟಿಕೊಟ್ಟರು.</p>.<p>ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆಡಳಿತ ವೈಖರಿಯನ್ನು ಟೀಕಿಸುವ ಹಾಡುಗಳನ್ನು ಗಾಯಕರು ಹಾಡಿದಾಗ ಪ್ರತಿಭಟನಕಾರರೆಲ್ಲ ಧ್ವನಿಗೂಡಿಸಿದರು.</p>.<p>ಸಿಎಎ ಮತ್ತು ಎನ್ಆರ್ಸಿ ವಿರುದ್ಧದ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ‘ಧರ್ಮ, ಜಾತಿ ಆಧಾರದಲ್ಲಿ ತಾರತಮ್ಯ ಮಾಡುವುದು ಸಂವಿಧಾನಕ್ಕೆವಿರುದ್ಧವಾದ ನಡೆ. ಈ ಹೋರಾಟ ಯಾರ ವಿರುದ್ಧವೂ ಅಲ್ಲ. ಸಂವಿಧಾನವನ್ನು ಉಳಿಸುವ ಸಲುವಾಗಿ ಈ ನಡೆ ಅನಿವಾರ್ಯ’ ಎಂದು ಸ್ಪಷ್ಟಪಡಿಸಿದರು.</p>.<p>‘ಮಹಿಳೆಯರನ್ನೇ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸುವುದು ನಮ್ಮ ಉದ್ದೇಶವಾಗಿರಲಿಲ್ಲ. ಆದರೂ, ವಿದ್ಯಾರ್ಥಿನಿಯರೇ ಹೆಚ್ಚಾಗಿ ಬಂದಿದ್ದಾರೆ. ಸಿಎಎ ಮತ್ತು ಎನ್ಆರ್ಸಿಯಿಂದ ಮಹಿಳೆಯರೇ ಹೆಚ್ಚು ತೊಂದರೆ ಅನುಭವಿಸಲಿದ್ದಾರೆ’ ಎಂದು ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಷನ್ನ(ಎಸ್ಐಒ) ರಾಜ್ಯ ಘಟಕದ ಅಧ್ಯಕ್ಷೆ ಉಮೈರಾ ಬಾನು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>