ಬಜೆಟ್ನಲ್ಲಿ ಆರೋಗ್ಯ ಇಲಾಖೆ ಬಲಗೊಳಿಸಲು ಶೇ 15ರಷ್ಟು ಅನುದಾನ ಒದಗಿಸುವಂತೆ ಮನವಿ ಸಲ್ಲಿಸಲಾಗಿತ್ತು. ಕೇವಲ ಶೇ 4ರಷ್ಟು ಅನುದಾನ ನೀಡಿ ಅನ್ಯಾಯ ಎಸಗಿದ್ದಾರೆ. ಸಿಬ್ಬಂದಿಗೆ ಸರಿಯಾಗಿ ವೇತನ ದೊರೆಯದ ಕಾರಣ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರೂ ಯಾವೊಬ್ಬ ಅಧಿಕಾರಿಯೂ ಇತ್ತ ಸುಳಿಯಲಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.