ಕೇಂದ್ರ ಸಮಿತಿ ಭೇಟಿ: ದಿಡ್ಡಳ್ಳಿ ಆದಿವಾಸಿಗಳ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಕೇಂದ್ರ ಸಮಿತಿ ಪ್ರಮುಖರು ಫೆ.18ರಂದು ಸಂತ್ರಸ್ತರ ಅಹೋರಾತ್ರಿ ಹೋರಾಟದಲ್ಲಿ ಪಾಲ್ಗೊಂಡರು. ಕೇಂದ್ರ ಸಮಿತಿಯ ಪ್ರಮುಖರಾದ ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಕಂದೆಗಾಲ ಶ್ರೀನಿವಾಸ್, ನೇಮಿಚಂದ್, ಪದ್ಮ, ಮಲ್ಲಿಗೆ ಸೇರಿದಂತೆ ಇನ್ನಿತರರು ಸಂತ್ರಸ್ತರನ್ನು ಭೇಟಿ ಮಾಡಲಿದ್ದು, ಶಾಶ್ವತ ಸೂರಿನ ಬಗೆಗೆ ಚರ್ಚೆ ನಡೆಸಲಿದ್ದಾರೆ ಎಂದು ಹೋರಾಟ ಸಮಿತಿಯ ಪ್ರಮುಖರಾದ ಕೃಷ್ಣ ತಿಳಿಸಿದ್ದಾರೆ.