ಸಕಲೇಶಪುರ: ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು 4 ದಿನಗಳಿಂದ ಬಾಳ್ಳುಪೇಟೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿತು.
ಪ್ರತಿಭಟನಾಕಾರರು ಅಂಗಡಿಗಳನ್ನು ಬಂದ್ ಮಾಡಿ, ನಾಶವಾದ ಬೆಳೆಯನ್ನು ಹೆದ್ದಾರಿಗೆ ಚೆಲ್ಲಿ ರಸ್ತೆ ತಡೆ ನಡೆಸಿದರು.
ಧರಣಿ ಕುಳಿತ ಶಾಸಕ: ರೈತರು, ಬೆಳೆಗಾರರ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಶಾಸಕ ಎಚ್.ಕೆ.ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಬಿ.ಶಿವರಾಂ, ನಿವೃತ್ತ ಅಧಿಕಾರಿ ಸಿದ್ದಯ್ಯ ಸೇರಿ ಹಲವರು ಧರಣಿ ಕುಳಿತರು.