ಬೆಳೆ ಚೆಲ್ಲಿ ಧರಣಿ; ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹ

ಸಕಲೇಶಪುರ: ಆಲೂರು ಹಾಗೂ ಸಕಲೇಶಪುರ ತಾಲ್ಲೂಕುಗಳಲ್ಲಿ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು 4 ದಿನಗಳಿಂದ ಬಾಳ್ಳುಪೇಟೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಭಾನುವಾರ ತೀವ್ರ ಸ್ವರೂಪ ಪಡೆದುಕೊಂಡಿತು.
ಪ್ರತಿಭಟನಾಕಾರರು ಅಂಗಡಿಗಳನ್ನು ಬಂದ್ ಮಾಡಿ, ನಾಶವಾದ ಬೆಳೆಯನ್ನು ಹೆದ್ದಾರಿಗೆ ಚೆಲ್ಲಿ ರಸ್ತೆ ತಡೆ ನಡೆಸಿದರು.
ಧರಣಿ ಕುಳಿತ ಶಾಸಕ: ರೈತರು, ಬೆಳೆಗಾರರ ಸಂಘಟನೆಗಳು, ಕರ್ನಾಟಕ ರಕ್ಷಣಾ ವೇದಿಕೆ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ಶಾಸಕ ಎಚ್.ಕೆ.ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಬಿ.ಶಿವರಾಂ, ನಿವೃತ್ತ ಅಧಿಕಾರಿ ಸಿದ್ದಯ್ಯ ಸೇರಿ ಹಲವರು ಧರಣಿ ಕುಳಿತರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.