<p><strong>ಮಸ್ಕಿ:</strong> ಶಾಸಕ ಪ್ರತಾಪಗೌಡ ಪಾಟೀಲ ಅವರು ರಾಜೀನಾಮೆ ನೀಡಿದ್ದನ್ನು ಪ್ರತಿಭಟಿಸಿ ಭಾನುವಾರ ಪಟ್ಟಣದಲ್ಲಿನ ಕಿಲ್ಲಾದಲ್ಲಿರುವ ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.</p>.<p>ಸಿಂಧನೂರು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಖಾಜಾ ಹುಸೇನ್ ರೌಡಕುಂದ ನೇತೃತ್ವದಲ್ಲಿ 10 ಕ್ರೂಸರ್ ವಾಹನಗಳಲ್ಲಿ ಬಂದಕಾರ್ಯಕರ್ತರನ್ನು ಶಾಸಕರ ನಿವಾಸಕ್ಕೆ ತೆರಳುವ ಮಾರ್ಗದ ವಾಲ್ಮೀಕಿ ಭವನದ ಬಳಿ ಪೊಲೀಸರು ತಡೆದರು. ವಾಹನದಲ್ಲಿ ಠಾಣೆಗೆ ಕರೆದೊಯ್ದುನಂತರ ಬಿಡುಗಡೆ ಮಾಡಿದರು.</p>.<p>ಈ ಸಂದರ್ಭದಲ್ಲಿಖಾಜಾ ಹುಸೇನ್ ಮಾತನಾಡಿ, ‘ಪ್ರತಾಪಗೌಡ ಪಾಟೀಲ ಅವರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಿ ಗೆಲ್ಲಿಸಿದೆ. ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಿದೆ. ಅವರು ರಾಜೀನಾಮೆ ನೀಡಿದ್ದು ಖಂಡನೀಯ’ ಎಂದರು.</p>.<p>ಮಸ್ಕಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಿಂದ ದೂರ ಉಳಿದಿದ್ದರು.</p>.<p class="Subhead">ಪ್ರತಿಭಟನೆಗೆ ಖಂಡನೆ: ‘ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆಯಾದ ಕಾರಣ ಮತದಾರರು ಸೇರಿ ಎಲ್ಲರ ಒತ್ತಾಸೆಯಂತೆ ಪ್ರತಾಪಗೌಡ ಪಾಟೀಲರು ರಾಜೀನಾಮೆ ನೀಡಿದ್ದಾರೆ’ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.</p>.<p>ಶಾಸಕರ ನಿವಾಸದ ಬಳಿ ನೆರೆದಿದ್ದ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕ್ಷೇತ್ರಕ್ಕೆ ಸಂಬಂಧವಿರದ ಬೇರೆ ತಾಲ್ಲೂಕಿನ ಯುವ ಕಾಂಗ್ರೆಸ್ನವರು ಬಾಡಿಗೆ ಕಾರ್ಯಕರ್ತರನ್ನು ಕರೆ ತಂದು ಶಾಸಕ ನಿವಾಸಕ್ಕೆ ಮುತ್ತಿಗೆ ಹಾಕಿಸಿದ್ದಾರೆ’ ಎಂದರು.</p>.<p class="Subhead">ಪ್ರಗತಿಪರ ಸಂಘಟನೆ ಪ್ರತಿಭಟನೆ: ‘ಪ್ರತಾಪಗೌಡ ಪಾಟೀಲ ಅವರು ರಾಜೀನಾಮೆ ನೀಡಿದ್ದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>‘ಹಣ ಮತ್ತು ಸಚಿವ ಸ್ಥಾನದ ಆಸೆಗಾಗಿ ಕ್ಷೇತ್ರದ ಶಾಸಕರು ರಾಜೀನಾಮೆ ನೀಡಿದ್ದಾರೆ’ ಎಂದುಆರ್ವೈಎಫ್ ಸಂಘಟನೆ ಸಂಚಾಲಕ ನಾಗರಾಜ ಪೂಜಾರಿ ಹೇಳಿದರು.</p>.<p><strong>‘ವಿಶ್ವಾಸಮತದಲ್ಲಿ ಪಾಲ್ಗೊಳ್ಳಬೇಕು’</strong></p>.<p><strong>ಸಿಂಧನೂರು</strong>: ‘ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ಶಾಸಕ ಪ್ರತಾಪಗೌಡ ಪಾಟೀಲ ಪಾಲ್ಗೊಳ್ಳಬೇಕು. ಇಲ್ಲದಿದ್ದರೆ, ಯುವ ಕಾಂಗ್ರೆಸ್ನಿಂದ ಪ್ರತಿಭಟಿಸಲಾಗುವುದು’ ಎಂದು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ಎಚ್ಚರಿಕೆ ನೀಡಿದರು.</p>.<p>‘ಪ್ರತಾಪಗೌಡ ಪಾಟೀಲ ಅವರು ಕಾಂಗ್ರೆಸ್ನಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನವೂ ನೀಡಲಾಗಿದೆ. ಆದರೆ ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ,ಬಿಜೆಪಿ ಸೇರ್ಪಡೆಗೆ ಮುಂದಾಗಿರುವುದು ಅಕ್ಷಮ್ಯ ಅಪರಾಧ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ಶಾಸಕ ಪ್ರತಾಪಗೌಡ ಪಾಟೀಲ ಅವರು ರಾಜೀನಾಮೆ ನೀಡಿದ್ದನ್ನು ಪ್ರತಿಭಟಿಸಿ ಭಾನುವಾರ ಪಟ್ಟಣದಲ್ಲಿನ ಕಿಲ್ಲಾದಲ್ಲಿರುವ ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.</p>.<p>ಸಿಂಧನೂರು ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಖಾಜಾ ಹುಸೇನ್ ರೌಡಕುಂದ ನೇತೃತ್ವದಲ್ಲಿ 10 ಕ್ರೂಸರ್ ವಾಹನಗಳಲ್ಲಿ ಬಂದಕಾರ್ಯಕರ್ತರನ್ನು ಶಾಸಕರ ನಿವಾಸಕ್ಕೆ ತೆರಳುವ ಮಾರ್ಗದ ವಾಲ್ಮೀಕಿ ಭವನದ ಬಳಿ ಪೊಲೀಸರು ತಡೆದರು. ವಾಹನದಲ್ಲಿ ಠಾಣೆಗೆ ಕರೆದೊಯ್ದುನಂತರ ಬಿಡುಗಡೆ ಮಾಡಿದರು.</p>.<p>ಈ ಸಂದರ್ಭದಲ್ಲಿಖಾಜಾ ಹುಸೇನ್ ಮಾತನಾಡಿ, ‘ಪ್ರತಾಪಗೌಡ ಪಾಟೀಲ ಅವರಿಗೆ ಕಾಂಗ್ರೆಸ್ ಪಕ್ಷವು ಟಿಕೆಟ್ ನೀಡಿ ಗೆಲ್ಲಿಸಿದೆ. ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಿದೆ. ಅವರು ರಾಜೀನಾಮೆ ನೀಡಿದ್ದು ಖಂಡನೀಯ’ ಎಂದರು.</p>.<p>ಮಸ್ಕಿ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಿಂದ ದೂರ ಉಳಿದಿದ್ದರು.</p>.<p class="Subhead">ಪ್ರತಿಭಟನೆಗೆ ಖಂಡನೆ: ‘ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆಯಾದ ಕಾರಣ ಮತದಾರರು ಸೇರಿ ಎಲ್ಲರ ಒತ್ತಾಸೆಯಂತೆ ಪ್ರತಾಪಗೌಡ ಪಾಟೀಲರು ರಾಜೀನಾಮೆ ನೀಡಿದ್ದಾರೆ’ ಎಂದು ಪುರಸಭೆ ಮಾಜಿ ಅಧ್ಯಕ್ಷ ಮೌನೇಶ ಮುರಾರಿ ಹೇಳಿದರು.</p>.<p>ಶಾಸಕರ ನಿವಾಸದ ಬಳಿ ನೆರೆದಿದ್ದ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕ್ಷೇತ್ರಕ್ಕೆ ಸಂಬಂಧವಿರದ ಬೇರೆ ತಾಲ್ಲೂಕಿನ ಯುವ ಕಾಂಗ್ರೆಸ್ನವರು ಬಾಡಿಗೆ ಕಾರ್ಯಕರ್ತರನ್ನು ಕರೆ ತಂದು ಶಾಸಕ ನಿವಾಸಕ್ಕೆ ಮುತ್ತಿಗೆ ಹಾಕಿಸಿದ್ದಾರೆ’ ಎಂದರು.</p>.<p class="Subhead">ಪ್ರಗತಿಪರ ಸಂಘಟನೆ ಪ್ರತಿಭಟನೆ: ‘ಪ್ರತಾಪಗೌಡ ಪಾಟೀಲ ಅವರು ರಾಜೀನಾಮೆ ನೀಡಿದ್ದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>‘ಹಣ ಮತ್ತು ಸಚಿವ ಸ್ಥಾನದ ಆಸೆಗಾಗಿ ಕ್ಷೇತ್ರದ ಶಾಸಕರು ರಾಜೀನಾಮೆ ನೀಡಿದ್ದಾರೆ’ ಎಂದುಆರ್ವೈಎಫ್ ಸಂಘಟನೆ ಸಂಚಾಲಕ ನಾಗರಾಜ ಪೂಜಾರಿ ಹೇಳಿದರು.</p>.<p><strong>‘ವಿಶ್ವಾಸಮತದಲ್ಲಿ ಪಾಲ್ಗೊಳ್ಳಬೇಕು’</strong></p>.<p><strong>ಸಿಂಧನೂರು</strong>: ‘ಸಮ್ಮಿಶ್ರ ಸರ್ಕಾರದ ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ಶಾಸಕ ಪ್ರತಾಪಗೌಡ ಪಾಟೀಲ ಪಾಲ್ಗೊಳ್ಳಬೇಕು. ಇಲ್ಲದಿದ್ದರೆ, ಯುವ ಕಾಂಗ್ರೆಸ್ನಿಂದ ಪ್ರತಿಭಟಿಸಲಾಗುವುದು’ ಎಂದು ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ಎಚ್ಚರಿಕೆ ನೀಡಿದರು.</p>.<p>‘ಪ್ರತಾಪಗೌಡ ಪಾಟೀಲ ಅವರು ಕಾಂಗ್ರೆಸ್ನಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಅನುದಾನವೂ ನೀಡಲಾಗಿದೆ. ಆದರೆ ಈಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ,ಬಿಜೆಪಿ ಸೇರ್ಪಡೆಗೆ ಮುಂದಾಗಿರುವುದು ಅಕ್ಷಮ್ಯ ಅಪರಾಧ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>