ಹಳೆ ಜೆಡಿಎಸ್ ಕಚೇರಿ ಮುಂಭಾಗದಲ್ಲಿ ಬೆಂಗಳೂರು- ಗೌರಿಬಿದನೂರು ಬಸ್ಗೆ ಪ್ರತಿಭಟನಾನಿರತರು ಕಲ್ಲು ತೂರಿ, ಗಾಜು ಜಖಂಗೊಳಿಸಿದರು.ಬಸ್ ಬೆಂಗಳೂರಿನಿಂದ ಗೌರಿಬಿದನೂರು ಕಡೆ ತೆರಳುತ್ತಿತ್ತು.
ಡಿ.ಕೆ. ಶಿವಕುಮಾರ್ ನಿವಾಸಕ್ಕೆ ಭೇಟಿ: ಕಾಂಗ್ರೆಸ್ ಮುಖಂಡರಾದ ರಮೇಶ್ ಕುಮಾರ್ ಮತ್ತು ಚೆಲುವರಾಯಸ್ವಾಮಿ ಅವರು ಶಾಸಕ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಬುಧವಾರ ಭೇಟಿ ನೀಡಿದರು.
'ಶಿವಕುಮಾರ್ ಅವರಿಗೆ ಏನೂ ಆಗುವುದಿಲ್ಲ. ಎರಡು ಮೂರುದಿನಗಳಲ್ಲಿ ಅವರು ಮನೆಗೆ ವಾಪಸ್ ಆಗಲಿದ್ದಾರೆ' ಎಂದು ಇಬ್ಬರು ನಾಯಕರೂ ಶಿವಕುಮಾರ್ ಅವರ ಪತ್ನಿ, ಮಕ್ಕಳಿಗೆ ಧೈರ್ಯ ತುಂಬಿದರು
ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ರಮೇಶ್ ಕುಮಾರ್ ಮತ್ತು ಚೆಲುವರಾಯಸ್ವಾಮಿ, 'ಇದು ಖಾಸಗಿ ಭೇಟಿ’ಎಂದಷ್ಟೇಹೇಳಿದರು.