ಕೆಜಿಎಫ್: ಠಾಣೆಗೆ ಕರೆತಂದ ಆರೋಪಿಗೆ ನೃತ್ಯ ಮಾಡುವಂತೆ ಒತ್ತಾಯಿಸಿ ಬೂಟುಗಾಲಿನಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಕೆಲಸದಿಂದ ಅಮಾನತಾಗಿರುವ ಬೇತಮಂಗಲ ಠಾಣೆ ಸಬ್ ಇನ್ಸ್ಪೆಕ್ಟರ್ ಹೊನ್ನೇಗೌಡ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಬುಧವಾರ ಪ್ರಕರಣ ದಾಖಲಾಗಿದೆ.
‘ನನ್ನ ಮೇಲೆ ಹೊನ್ನೇಗೌಡ ಅವರು ದೌರ್ಜನ್ಯ ನಡೆಸಿದ್ದಾರೆ. ಜಾತಿ ನಿಂದನೆ ಮಾಡಿದ್ದಾರೆ’ ಎಂದು ರಾಮಸಾಗರದ ಶಿವಪ್ಪ ಬೇತಮಂಗಲ ಠಾಣೆಗೆ ದೂರು ನೀಡಿದ್ದಾರೆ. ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಉಪಾಧ್ಯಕ್ಷ ಎಲ್.ಮುರುಗನ್ ಬುಧವಾರ ರಾಣೆಗೆ ಭೇಟಿ ನೀಡಿದ್ದರು.
‘ಡಿವೈಎಸ್ಪಿ ಮುಂದಿನ ತನಿಖೆ ನಡೆಸಲಿದ್ದಾರೆ’ ಎಂದು ಎಸ್ಪಿ ಬಿ.ಎಸ್.ಲೋಕೇಶ್ಕುಮಾರ್ ತಿಳಿಸಿದ್ದಾರೆ.