ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳಲು ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಮಹಿಳಾ ಠಾಣೆಯ ಪಿಎಸ್ಐ ಮರಿಯಮ್ಮ ಹಾಗೂ ನೇತಾಜಿ ನಗರ ಠಾಣೆಯ ಕಾನ್ಸ್ಟೇಬಲ್ ಆಂಜಿನೇಯ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬುಧವಾರ ಅಮಾನತು ಮಾಡಿದ್ದಾರೆ.
ಯುವತಿ ಕಾಣೆಯಾದಾಗ ಪೊಲೀಸ್ ಠಾಣೆಗೆ ದೂರು ನೀಡಲು ಬಂದಾಗ, ಸರಿಯಾಗಿ ಪ್ರತಿಕ್ರಿಯೆ ನೀಡಲಿಲ್ಲ. ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರೆ ಮಗಳು ಸಾಯುತ್ತಿರಲಿಲ್ಲ ಎಂದು ಮೃತ ವಿದ್ಯಾರ್ಥಿನಿಯ ಪಾಲಕರು ಆರೋಪ ಮಾಡಿದ್ದರು.
ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೈಗೊಂಡ ಮೊದಲ ಕ್ರಮ ಇದಾಗಿದೆ.