ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಂದಾಪುರ, ಮೈಸೂರು, ಮಡಿಕೇರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಫ್ಲೈ ಬಸ್ಗಳನ್ನು ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಅನಂತಪುರ ಮತ್ತು ಕಡಪಕ್ಕೆ ವಿಸ್ತರಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಅದಕ್ಕಾಗಿ ಬಸ್ಗಳ ಸಂಚಾರ ಸಮಯ ನಿಗದಿಪಡಿಸುವ ಬಗ್ಗೆ ಪ್ರಯಾಣಿಕರಿಂದ ಸಲಹೆ ಆಹ್ವಾನಿಸಲಾಗಿದೆ. ಸಲಹೆಗಳನ್ನು pro@ksrtc.org ಅಥವಾ ನಿಗಮದ ಫೇಸ್ಬುಕ್ ಖಾತೆ ಮೂಲಕವೂ ನೀಡಬಹುದು ಎಂದು ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.