<p><strong>ಬೆಂಗಳೂರು</strong>: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ನ.29ರಂದು ಸ್ಪರ್ಧಾತ್ಮಕ ಪರೀಕ್ಷೆ ಆರಂಭವಾಗಲಿದ್ದು, ಡಿ.8ಕ್ಕೆ ಮುಗಿಯಲಿದೆ.</p>.<p>ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಪ್ರತಿದಿನ ಎರಡು ನಿರ್ದಿಷ್ಟ ಪತ್ರಿಕೆಗಳ ಪರೀಕ್ಷೆ ನಡೆಯಲಿದೆ. ಕ್ರಮವಾಗಿ ಬೆಳಿಗ್ಗೆ 9.30ರಿಂದ 12.30 ಮತ್ತು ಮಧ್ಯಾಹ್ನ 2 ರಿಂದ 5 ಗಂಟೆವರೆಗೆ ಸಮಯ ನಿಗದಿ ಮಾಡಲಾಗಿದೆ.</p>.<p>ಸ್ನಾತಕೋತ್ತರ ಪದವಿಯಲ್ಲಿ ಶೇ50ರಷ್ಟು ಅಂಕ ಗಳಿಸಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳು ಸಹ ಈ ನೇಮಕಾತಿಗೆ ಅರ್ಹರಾಗುವಂತೆ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಮಾಡಲು ಸರ್ಕಾರ ಈ ಹಿಂದೆ ಶಿಕ್ಷಣ ಇಲಾಖೆಗೆ ಸೂಚಿಸಿತ್ತು.</p>.<p>ಅಲ್ಲದೆ, ತಿದ್ದುಪಡಿ ನಿಯಮ ಜಾರಿಯಾಗುವವರೆಗೂ ನೇಮಕಾತಿ ಪ್ರಕ್ರಿಯೆ ಮುಂದೂಡಲು ಸೂಚನೆ ನೀಡಿತ್ತು. ಹಾಗಾಗಿ ಅ.11ರಿಂದ 23ರ ವರೆಗೆ ನಡೆಯಬೇಕಿದ್ದ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು.</p>.<p>ಆದರೆ, ನೇಮಕಾತಿಯ ಅಧಿಸೂಚನೆಯನ್ನು ಒಮ್ಮೆ ಹೊರಡಿಸಿದ ಬಳಿಕ, ನಿಯಮಗಳನ್ನು ತಿದ್ದುಪಡಿ ಮಾಡಲು ಅವಕಾಶ ಇಲ್ಲ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದರಿಂದ, ಪ್ರಕ್ರಿಯೆ ಮುಂದುವರಿಸಲು ಸರ್ಕಾರವು ಪ್ರಾಧಿಕಾರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ಭರ್ತಿಗೆ ನ.29ರಂದು ಸ್ಪರ್ಧಾತ್ಮಕ ಪರೀಕ್ಷೆ ಆರಂಭವಾಗಲಿದ್ದು, ಡಿ.8ಕ್ಕೆ ಮುಗಿಯಲಿದೆ.</p>.<p>ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ. ಪ್ರತಿದಿನ ಎರಡು ನಿರ್ದಿಷ್ಟ ಪತ್ರಿಕೆಗಳ ಪರೀಕ್ಷೆ ನಡೆಯಲಿದೆ. ಕ್ರಮವಾಗಿ ಬೆಳಿಗ್ಗೆ 9.30ರಿಂದ 12.30 ಮತ್ತು ಮಧ್ಯಾಹ್ನ 2 ರಿಂದ 5 ಗಂಟೆವರೆಗೆ ಸಮಯ ನಿಗದಿ ಮಾಡಲಾಗಿದೆ.</p>.<p>ಸ್ನಾತಕೋತ್ತರ ಪದವಿಯಲ್ಲಿ ಶೇ50ರಷ್ಟು ಅಂಕ ಗಳಿಸಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳು ಸಹ ಈ ನೇಮಕಾತಿಗೆ ಅರ್ಹರಾಗುವಂತೆ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ ಮಾಡಲು ಸರ್ಕಾರ ಈ ಹಿಂದೆ ಶಿಕ್ಷಣ ಇಲಾಖೆಗೆ ಸೂಚಿಸಿತ್ತು.</p>.<p>ಅಲ್ಲದೆ, ತಿದ್ದುಪಡಿ ನಿಯಮ ಜಾರಿಯಾಗುವವರೆಗೂ ನೇಮಕಾತಿ ಪ್ರಕ್ರಿಯೆ ಮುಂದೂಡಲು ಸೂಚನೆ ನೀಡಿತ್ತು. ಹಾಗಾಗಿ ಅ.11ರಿಂದ 23ರ ವರೆಗೆ ನಡೆಯಬೇಕಿದ್ದ ಈ ಪರೀಕ್ಷೆಯನ್ನು ಮುಂದೂಡಲಾಗಿತ್ತು.</p>.<p>ಆದರೆ, ನೇಮಕಾತಿಯ ಅಧಿಸೂಚನೆಯನ್ನು ಒಮ್ಮೆ ಹೊರಡಿಸಿದ ಬಳಿಕ, ನಿಯಮಗಳನ್ನು ತಿದ್ದುಪಡಿ ಮಾಡಲು ಅವಕಾಶ ಇಲ್ಲ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದರಿಂದ, ಪ್ರಕ್ರಿಯೆ ಮುಂದುವರಿಸಲು ಸರ್ಕಾರವು ಪ್ರಾಧಿಕಾರಕ್ಕೆ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>