ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಉಪನ್ಯಾಸಕರ ನೇಮಕ ಪ್ರಕ್ರಿಯೆ; ಅಧಿಕಾರಿಗಳಿಂದ ಮಾಹಿತಿ ಕೇಳಿದ ಸಚಿವ

Last Updated 23 ಸೆಪ್ಟೆಂಬರ್ 2019, 9:01 IST
ಅಕ್ಷರ ಗಾತ್ರ

ಬೆಂಗಳೂರು: ಪಿಯು ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಕೀ ಉತ್ತರದಲ್ಲಿ ತಪ್ಪುಗಳು ಉಳಿದಿರುವ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಕ್ಯಾಪ್ಟನ್ ರಾಜೇಂದ್ರ ಅವರಿಂದ ಮಾಹಿತಿ ಪಡೆದರು.

ಪ್ರಜಾವಾಣಿಯಲ್ಲಿ ಪ್ರಕಟವಾಗಿರುವಂತೆ ನಾಲ್ಕು ವಿಷಯಗಳ ಕೀ ಉತ್ತರದಲ್ಲಿ ತಪ್ಪುಗಳಿರುವ ಸಂಶಯ ಬಂದಿರುವುದು ನಿಜ. ಆದರೆ ಉತ್ತರದಲ್ಲೇ ಗೊಂದಲ ಇರುವುದರಿಂದ ಈ ಗೊಂದಲ ಉಂಟಾಗಿದೆ. ಪರಿಣಿತರಿಂದ ಮಾಹಿತಿ ಪಡೆದುಕೊಂಡು ಅವರ ಸಲಹೆಯಂತೆ ಕೊನೆಯ ಕೀ ಉತ್ತರ ಪಡೆಯಲಾಗಿದೆ ಎಂದು ರಾಜೇಂದ್ರ ಅವರು ವಿವರಿಸಿದರು.

ಸಾರ್ವಜನಿಕ ಬದುಕಲ್ಲಿ ಇಂತಹ ಯಾವ ಅನುಮಾನಗಳಿಗೂ ಅವಕಾಶ ಇರಬಾರದು ಎಂದು ಸಚಿವರು ಸೂಚಿಸಿದರು.

ಚುನಾವಣಾ ಆಯೋಗ ಅನುಮತಿ ನೀಡಿದರೆ ತಕ್ಷಣ ಆಯ್ಕೆ ಪಟ್ಟಿ ಬಿಡುಗಡೆ ಮಾಡುವುದಾಗಿ ರಾಜೇಂದ್ರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT