ಬೆಂಗಳೂರು: ಪಿಯು ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಕೀ ಉತ್ತರದಲ್ಲಿ ತಪ್ಪುಗಳು ಉಳಿದಿರುವ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಕ್ಯಾಪ್ಟನ್ ರಾಜೇಂದ್ರ ಅವರಿಂದ ಮಾಹಿತಿ ಪಡೆದರು.
ಪ್ರಜಾವಾಣಿಯಲ್ಲಿ ಪ್ರಕಟವಾಗಿರುವಂತೆ ನಾಲ್ಕು ವಿಷಯಗಳ ಕೀ ಉತ್ತರದಲ್ಲಿ ತಪ್ಪುಗಳಿರುವ ಸಂಶಯ ಬಂದಿರುವುದು ನಿಜ. ಆದರೆ ಉತ್ತರದಲ್ಲೇ ಗೊಂದಲ ಇರುವುದರಿಂದ ಈ ಗೊಂದಲ ಉಂಟಾಗಿದೆ. ಪರಿಣಿತರಿಂದ ಮಾಹಿತಿ ಪಡೆದುಕೊಂಡು ಅವರ ಸಲಹೆಯಂತೆ ಕೊನೆಯ ಕೀ ಉತ್ತರ ಪಡೆಯಲಾಗಿದೆ ಎಂದು ರಾಜೇಂದ್ರ ಅವರು ವಿವರಿಸಿದರು.