ಬೆಂಗಳೂರು: ಮೌಲ್ಯಮಾಪನದ ಸಂಭಾವನೆ ನೀಡಬೇಕು, ನೆಟ್, ಸ್ಲೆಟ್, ಪಿಎಚ್.ಡಿ ಪದವಿ ಪಡೆದ ಉಪನ್ಯಾಸಕರಿಗೆ ಪದವಿ ಕಾಲೇಜುಗಳಿಗೆ ಬಡ್ತಿ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಮಂಗಳವಾರ ಇಲ್ಲಿಧರಣಿ ಸತ್ಯಾಗ್ರಹ ನಡೆಸಿದರು. ಅಲ್ಲದೆ ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಸ್ಥಗಿತಗೊಳಿಸಿದರು.