ಇಲಾಖೆಯ ನಿರ್ದೇಶಕಿ ಎಂ.ಕನಗವಲ್ಲಿ ಅವರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ‘ಈ ಪ್ರತಿಭಟನೆ ಮೌಲ್ಯಮಾಪನ ಬಹಿಷ್ಕಾರದ ಮೊದಲ ಹಂತ ಎಂದು ತಿಳಿಸುವ ಕರಪತ್ರ ಹೊರಡಿಸಲಾಗಿದೆ. ಪರೀಕ್ಷೆಗಳು ಹತ್ತಿರವಾಗುತ್ತಿರುವುದರಿಂದ ಪ್ರತಿಭಟನೆ ಕೈಬಿಡುವಂತೆ ಉಪನ್ಯಾಸಕರಿಗೆ ತಿಳಿಸಬೇಕು’ ಎಂದು ಜಿಲ್ಲಾ ಉಪನಿರ್ದೇಶಕರಿಗೆ ಸೂಚಿಸಿದ್ದಾರೆ.