ಪಿಯುಸಿಎಲ್ ರಾಜ್ಯ ಘಟಕದ ಅಧ್ಯಕ್ಷ ವೈ.ಎಸ್.ರಾಜೇಂದ್ರ , ಈವರೆಗಿನ ತಮ್ಮ ಅಧ್ಯಯದಲ್ಲಿ ನಗರದಲ್ಲಿ ನಡೆದ ಘಟನೆ, ಪೊಲೀಸ್ ಗೋಲಿಬಾರ್, ಪೊಲೀಸರ ಕಾರ್ಯಾಚರಣೆ ಕುರಿತಂತೆ ಸಾಕಷ್ಟು ಶಂಕೆ, ಪ್ರಶ್ನೆಗಳು ಮೂಡಿವೆ. ಹೈಲ್ಯಾಂಡ್ ಆಸ್ಪತ್ರೆಗೆ ಪೊಲೀಸರು ನುಗ್ಗಿದ ಘಟನೆಯನ್ನು ಒಳಗೊಂಡು ಸಮಗ್ರವಾಗಿ ನ್ಯಾಯಾಂಗ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.