ಬೆಳಗಾವಿ: ಗೋಕಾಕ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಮತ್ತು ಕಾಂಗ್ರೆಸ್ ಟಿಕೆಟ್ಗೂ ಪ್ರಯತ್ನಿಸಿದ್ದ ಅಶೋಕ ಪೂಜಾರಿ, ಕೊನೆ ಕ್ಷಣದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸುತ್ತಾರೆ ಎನ್ನಲಾಗುತ್ತಿದೆ. ಆದರೆ, ಇದನ್ನು ಪೂಜಾರಿ ಖಚಿತಪಡಿಸಿಲ್ಲ.
ಸೋಮವಾರ (ನ. 18ರಂದು) ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಬಂದು ನಾಮಪತ್ರ ಹಾಕಿಸುತ್ತಾರೆ ಎಂದೂ ಹೇಳಲಾಗುತ್ತಿದೆ. ಇದನ್ನು ಜೆಡಿಎಸ್ನ ಕೆಲವು ಕಾರ್ಯಕರ್ತರು ಸಾಮಾಜಿಕ ಮಾಧ್ಯಮದಲ್ಲೂ ಹಾಕಿಕೊಂಡಿದ್ದಾರೆ.
‘ಇನ್ನೂ ಏನನ್ನೂ ನಿರ್ಧಾರ ಮಾಡಿಲ್ಲ’ ಎಂದು ಪೂಜಾರಿ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
2008ರ ಚುನಾವಣೆಯಲ್ಲಿ ಅವರು ಜೆಡಿಎಸ್ ಅಭ್ಯರ್ಥಿಯಾಗಿದ್ದರು.